ಮಂಗಳೂರು, ಜು.19 (DaijiworldNews/HR): "ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಹಿನ್ನಲೆಯಲ್ಲಿ ಜುಲೈ 21ರಂದು ನಡೆಯಲಿರುವ ಬಕ್ರೀದ್ ಹಬ್ಬ ಮತ್ತು ಇತರೆ ಹಬ್ಬ, ಜಾತ್ರೆಗಳ ಸಮಯದಲ್ಲಿ ಆಚರಣೆಯ ಸಂಧರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ವಧೆ, ಪ್ರಾಣಿ ಬಲಿ ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ" ಎಂದು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟನೆಯಲ್ಲಿ ಮಾಹಿತಿ ನೀಡಿರುವ ಅವರು, "ಜುಲೈ 21ರಂದು ನಡೆಯಲಿರುವ ಬಕ್ರೀದ್ ಹಬ್ಬದಂದು ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ನಿಷೇಧಿಸಿದ್ದು, ರಸ್ತೆಗಳಲ್ಲಿ, ಆಸ್ಪತ್ರೆ ಆವರಣ, ನರ್ಸಿಂಗ್ ಹೋಂ ಆವರಣ, ಶಾಲಾ ಕಾಲೇಜು ಆವರಣ, ಆಟದ ಮೈದಾನಗಳು, ಮಸೀದಿ, ಧಾರ್ಮಿಕ ಸ್ಥಳ, ಆವರಣಗಳಲ್ಲಿ ಪ್ರಾಣಿ ಬಲಿ ಸಂಪೂರ್ಣ ನಿಷೇಧಿಸಲಾಗಿದೆ.
ಇನ್ನು ಉದ್ಯಾನವನ, ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ ನಡೆಸುವಂತಿಲ್ಲ. ಪ್ರಾಣಿ ವಧೆ, ಬಲಿ ನಡೆಸುತ್ತಿರುವುದು ಕಂಡು ಬಂದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.