ಉಡುಪಿ, ಜು 20 (DaijiworldNews/HR): ಶ್ರೀ ಕೃಷ್ಣ ಮಠದಲ್ಲಿ ಶಯನೀ ಏಕಾದಶಿ ಪ್ರಯುಕ್ತ ಮಠದ ಋತ್ವಿಜರು ಸುದರ್ಶನ ಹೋಮ ನಡೆಸಿದು, ಬಳಿಕ ನಂತರ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಮುದ್ರಾಧಾರಣೆ ಮಾಡಿಕೊಂಡು, ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರಿಗೆ ಹಾಗೂ ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರಿಗೆ ತಪ್ತ ಮುದ್ರಾಧಾರಣೆ ನಡೆಸಿದರು.
ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಪರ್ಯಾಯ ಮಠಾಧೀಶರು ರಾಜಾಂಗಣದಲ್ಲಿ ಭಕ್ತಾಧಿಗಳಿಗೆ ಮುದ್ರಾಧಾರಣೆ ನಡೆಸಿದರು.
ಪೇಜಾವರದ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿಗಳು ಮತ್ತು ಸೋದೆ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿಗಳು, ಶಿರೂರು ಮಠದ ಶ್ರೀ ವೇದ ವರ್ಧನ ತೀರ್ಥ ಸ್ವಾಮೀಜಿ ಜೊತೆಯಾಗಿ ತಮ್ಮ ತಮ್ಮ ಮಠದಲ್ಲಿಯೇ ಮುದ್ರಾಧಾರಣೆ ಕಾರ್ಯಕ್ರಮ ನಡೆಯಿತು.