ಉಡುಪಿ, ಜು 21 (DaijiworldNews/PY): ಬ್ರಹ್ಮಾವರದ ವಿಶಾಲಾ ಗಾಣಿಗ ಕೊಲೆ ಪ್ರಕರಣ ಇದೀಗ ತಾರ್ಕಿಕ ಅಂತ್ಯ ಕಂಡಿದೆ. ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ನೇತೃತ್ವದಲ್ಲಿ ರಚಿಸಿದ ನಾಲ್ಕು ತಂಡಗಳು ಒಂದು ವಾರದೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಸಫಲವಾಗಿದೆ.
ಜುಲೈ12 ರಂದು ವಿಶಾಲಾ ಗಾಣಿಗ ಅವರು ಒಂಟಿಯಾಗಿದ್ದ ಸಮಯದಲ್ಲಿ ಯಾರೋ ಅಪರಿಚಿತರು ಫ್ಲಾಟ್ ಒಳಗೆ ಪ್ರವೇಶಿಸಿ ವಿಶಾಲಾ ಅವರನ್ನು ವಯರ್ನಿಂದ ಬಿಗಿದು ಹತ್ಯೆ ಮಾಡಿ ಆಕೆಯ ಮೈಮೇಲಿದ್ದ ಚಿನ್ನಾಭರಣಗಳನ್ನು ಸುಲಿಗೆ ಮಾಡಿರುವ ಬಗ್ಗೆ ಮಾಹಿತಿ ಪಡೆದ ತಕ್ಷಣವೇ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ ಎನ್, ಐ.ಪಿ.ಎಸ್.. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ, ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ, ಮಲ್ಪೆ ವೃತ್ತ ನಿರೀಕ್ಷಕ ಶರಣ ಗೌಡ, ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಮೋದ ಮತ್ತು ವಿಧಿ ವಿಜ್ಞಾನದ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು.
ಕೊಲೆ ಪ್ರಕರಣವನ್ನು ಭೇದಿಸಲು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಎನ್. ಐ.ಪಿ.ಎಸ್. ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಅವರ ಮಾರ್ಗದರ್ಶನದಂತೆ, ಸುಧಾಕರ ಎಸ್. ನಾಯ್ಕ, ಪೊಲೀಸ್ ಉಪ ಅಧೀಕ್ಷಕರು, ಉಡುಪಿ ಉಪ ವಿಭಾಗ, ಉಡುಪಿ ಅವರ ನಿರ್ದೇಶನದಂತೆ ಅನಂತ ಪದ್ಮನಾಭ, ಸಿಪಿಐ ಬ್ರಹ್ಮಾವರ ಮತ್ತು ಪಿ.ಎಸ್.ಐ ಶ್ರೀ ಗುರುನಾಥ ಬಿ ಹಾದಿಮನಿ ಅವರ ತಂಡ ಮಂಜುನಾಥ, ಪಿ.ಐ, ಮಣಿಪಾಲ ಮತ್ತು ಪಿ.ಎಸ್.ಐ ರಾಜಶೇಖರ ವಂದಲಿ ಶರಣಗೌಡ, ಸಿಪಿಐ, ಮಲ್ಪೆ ವೃತ್ತ ಮತ್ತು ಪಿ.ಎಸ್.ಐ ಮಧು ಸಂಪತ್ ಕುಮಾರ್ ಎ, ಸಿಪಿಐ ಕಾರ್ಕಳ ಮತ್ತು ಪಿ.ಎಸ್.ಐ, ರಾಘವೇಂದ್ರ ಸಿ ಮತ್ತು ಶ್ರೀಧರ್ ನಾಯ್ಕ ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ಆರ್.ಡಿ.ಸಿ.ಯ ತಾಂತ್ರಿಕ ತಂಡ ಒಳಗೊಂಡಂತೆ ಒಟ್ಟು 5 ವಿಶೇಷ ತಂಡಗಳನ್ನು ಆರೋಪಿಗಳ ಪತ್ತೆಗೆ ರಚಿಸಲಾಗಿತ್ತು.
ಆರೋಪಿಗಳ ಪತ್ತೆಗೆ ವಿಶೇಷ ತಂಡದ ಅಧಿಕಾರಿಗಳಾದ ಮಂಜುನಾಥ ಪಿ.ಐ ಮಣಿಪಾಲ, ಶರಣ ಗೌಡ, ಸಿಪಿಐ ಮಲ್ಪೆ, ಮಧು ಪಿ.ಎಸ್.ಐ ಕಾರ್ಕಳ ಮತ್ತು ರಾಜಶೇಖರ ವಂಡಲಿ, ಪಿ.ಎಸ್.ಐ ಮಣಿಪಾಲ ಇವರುಗಳು ತಾಂತ್ರಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರಯತ್ನ ನಡೆಸಿದ್ದರು. ಬಳಿಕ ಮಹತ್ವದ ಸುಳಿವಿನ ಆಧಾರದಲ್ಲಿ ಉತ್ತರಪ್ರದೇಶದ ಗೋರುರಕ್ಕೆ ತೆರಳಿ ಎಸ್.ಪಿ. ದಿನೇಶ್ ಕುಮಾರ್ ಐ.ಪಿ.ಎಸ್. ಹಾಗೂ ಅವರ ಎಸ್ಡಬ್ಲ್ಯೂಎಟಿ ತಂಡದ ಸಹಭಾಗಿತ್ವದಲ್ಲಿ ಆರೋಪಿ ಸ್ವಾಮಿನಾಥ ನಿಶಾದ (38) ಎಂಬಾತನ್ನು ಗೋರುರದಲ್ಲಿ ಬಂಧಿಸಿದರು.
ಜುಲೈ 19 ರಂದು ಬೈಂದೂರು ತಾಲೂಕಿನ ಉಪ್ಪುಂದದಲ್ಲಿ ಮತ್ತೋರ್ವ ಆರೋಪಿ ರಾಮಕೃಷ್ಣನನ್ನು ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ಹಾಗೂ ಗುರುನಾಥ ಬಿ ಹಾದಿಮನಿ, ಪಿ.ಎಸ್.ಐ ರವರ ತಂಡವು ಬಂಧಿಸಿತ್ತು. ಈತನನ್ನು ವಿಚಾರಣೆಗೆ ಒಳಪಡಿಸಿದ ಸಂದರ್ಭ, ಕಳೆದ 6 ತಿಂಗಳಿನಿಂದ ಸಂಚು ನಡೆಸಿ ಸುಫಾರಿ ಹಂತಕರಿಗೆ ಸುಮಾರು 2 ಲಕ್ಷಕ್ಕಿಂತ ಅಧಿಕ ಹಣ ನೀಡಿ ದುಬೈಯಲ್ಲಿ ಕುಳಿತು ಸಂಚು ರೂಪಿಸಿ ಜುಲೈ 12ರಂದು ಹಂತಕರನ್ನು ಮನೆಗೆ ಕಳುಹಿಸಿ ಕೊಲೆ ಮಾಡಿಸಿದ ವಿಚಾರ ತಿಳಿದುಬಂದಿದೆ.
ಕಾರ್ಯಾಚರಣೆಯಲ್ಲಿ ಅನಂತ ಪದ್ಮನಾಭ, ಸಿ.ಪಿ.ಐ., ಬ್ರಹ್ಮಾವರ, ಮಂಜುನಾಥ ಪಿ.ಐ. ಮಣಿಪಾಲ, ಶರಣಗೌಡ, ಸಿಪಿಐ, ಮಲ್ಪೆ ವೃತ್ತ, ಪ್ರಮೋದ್ ಪಿ.ಐ, ಉಡುಪಿ ನಗರ ಠಾಣೆ, ಸಂಪತ್ ಕುಮಾರ್ ಎ, ಸಿಪಿಐ ಕಾರ್ಕಳ, ಗುರುನಾಥ ಬಿ ಹಾದಿಮನಿ, ಪಿ.ಎಸ್.ಐ ಬ್ರಹ್ಮಾವರ, ಮಧು ಪಿ.ಎಸ್.ಐ ಕಾರ್ಕಳ ನಗರ, ರಾಘವೇಂದ್ರ ಪಿ.ಎಸ್.ಐ ಕಾಪು, ಶ್ರೀಧರ ನಾಯ್ಕ, ಪಿ.ಎಸ್.ಐ, ಶಂಕರನಾರಾಯಣ ಠಾಣೆ, ಕೆ.ಆರ್ ಸುನಿತಾ,.ಪಿ.ಎಸ್.ಐ ಬ್ರಹ್ಮಾವರ, ಸಂತೋಷ ಬಿ.ಪಿ, ಪಿ.ಎಸ್.ಐ ಕೋಟ, ಕೃಷ್ಣಪ್ಪ ಎ.ಎಸ್.ಐ, ಬ್ರಹ್ಮಾವರ ವೃತ್ತ ಕಛೇರಿ, ಎ.ಎಸ್.ಐ ರವರಾದ ಶ್ರೀ ಗೋಪಾಲ ಪೂಜಾರಿ, ನಾರಾಯಣ ಕೆ.ಎಸ್. ಸುಂದರ, ಬ್ರಹ್ಮಾವರ ಠಾಣೆ ಹಾಗೂ ಸಿಬ್ಬಂದಿಯವರಾದ ಚಂದ್ರ ಶೆಟ್ಟಿ, ವೆಂಕಟರಮಣ ದೇವಾಡಿಗ, ಪ್ರವೀಣ ಶೆಟ್ಟಿಗಾರ್, ಪ್ರದೀಪ್ನಾಯಕ, ಸತೀಶ, ವಾಸುದೇವ ಪೂಜಾರಿ, ಅಶೋಕ ಮೆಂಡನ್, ರಾಘವೇಂದ್ರ, ಸಂತೋಷ ಶೆಟ್ಟಿ, ಗಣೇಶ ದೇವಾಡಿಗ, ಸಬಿತಾ, ಜ್ಯೋತಿ ಎಂ, ಶಾಂಭವಿ, ಮೊಹಮ್ಮದ್ ಅಲ್, ದಿಲೀಪ್ ಕುಮಾರ್, ರವೀಂದ್ರ ಹೆಚ್, ಪ್ರಕಾಶ, ಬಸೀರ್, ಸಂದೀಪ್ಪಿ.ಕೆ, ವಿಕ್ರಂ, ನೇತ್ರಾವತಿ, ಅಪೂರ್ವ, ಜಿಲ್ಲಾ ಪೊಲೀಸ್ ಕಛೇರಿಯ ತಾಂತ್ರಿಕ ತಂಡದ ಸಿಬ್ಬಂದಿಗಳಾದ ಶಿವಾನಂದ, ದಿನೇಶ, ನಿತಿನ್ ಹಾಗೂ ಚಾಲಕರಾದ ಶೇಖರ್, ಸಂತೋಷ ಪೂಜಾರಿ ಮತ್ತು ಅಣ್ಣಪ್ಪ ಅವರ ಕೊಲೆ ಪ್ರಕರಣವನ್ನು ಭೇಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಪೋಲಿಸ್ ತಂಡಗಳ ಈ ಕಾರ್ಯಕ್ಕೆ ಪೊಲಿಸ್ ಡಿಜಿಪಿ ಪ್ರವೀಣ್ ಸೂದ್ 50 ಸಾವಿರ ಬಹುಮಾನ ಮೊತ್ತವನ್ನು ಘೋಷಿಸಿದ್ದು, ಐಜಿಪಿ ಅವರು ತಂಡದ ಕಾರ್ಯವನ್ನು ಶ್ಲಾಘಿಸಿದ್ದಾರೆ.