ಉಡುಪಿ, ಜು 22 (DaijiworldNews/MS): ನಗರದಲ್ಲಿ ಷೇರು ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯೊಬ್ಬರನ್ನು ಅಪಹರಿಸಿ ದರೋಡೆಗೈದ ಪ್ರಕರಣವನ್ನು ಪೊಲೀಸರು ಮೂರು ದಿನಗಳಲ್ಲಿ ಭೇದಿಸಿ ಮೂರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆಯ ಅಶೋಕ್ ಕುಮಾರ್ ಎಸ್ ಅವರನ್ನು ಅಪಹರಿಸಿ ದರೋಡೆಗೈದ ಬಳಿಕ ಅವರ ಬ್ಯಾಂಕ್ ಖಾತೆಯಿಂದ ಹಣ ನಗದು ಗೊಳಿಸಲು ಪ್ರಯತ್ನಿಸಿದ ಆರೋಪಿಗಳಾದ ಅನಿಲ್ ಪೂಜಾರಿ, ಸಂತೋಷ್ ಬೋವಿ, ಮಣಿ ಯಾನೆ ಮಣಿಕಂಠ ಖಾರ್ವಿ ಅವರನ್ನು ಕಟಪಾಡಿ ಜಂಕ್ಷನ್ ಬಳಿ ಬಂಧಿಸಲಾಗಿದೆ.
ಅವರಿಂದ ಕೃತ್ಯಕ್ಕೆ ಬಳಸಿದ ಪಿಸ್ತೂಲ್, ತಲವಾರು, ಸುಲಿಗೆ ಮಾಡಿದ 1.35 ಲಕ್ಷ ರೂಪಾಯಿ, ಮೊಬೈಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೂಲತಹ ತುಮಕೂರು ನಿವಾಸಿ ಅಶೋಕ್ ಕುಮಾರ್ ನಗರದ ವಾದಿರಾಜ ಕಾಂಪ್ಲೆಕ್ಸ್ ನಲ್ಲಿ ಷೇರು ಮಾರುಕಟ್ಟೆ ವ್ಯವಹಾರವನ್ನು ಇಬ್ಬರೊಂದಿಗೆ ಸೇರಿ ಮಾಡಿಕೊಂಡಿದ್ದರು. ಇವರು 42 ರಿಂದ 50 ಲಕ್ಷ ರೂ.ಗಳ ಹಣ ಚಲಾವಣೆ ಮಾಡಿಕೊಳ್ಳುತ್ತಿದ್ದರು. ಜು.16ರ ಅಪಹರಣ 3ಗಂಟೆಗೆ ಅಶೋಕ್ ಕುಮಾರ್ ಅವರ ಕಚೇರಿಗೆ ಬಂದಿದ್ದ ಸಂತೋಷ್ ಎಂಬಾತ ವ್ಯವಹಾರದ ಮಾತುಕತೆಯ ಸಲುವಾಗಿ ಆದರೆ ಇನ್ನೋವಾ ಕಾರಿನಲ್ಲಿ ಕರೆದುಕೊಂಡು ಹೋಗಿದ್ದ. ಅಜ್ಜರಕಾಡು ಬಳಿಗೆ ಹೋಗುವಾಗ ಮತ್ತೆ ನಾಲ್ಕು ಮಂದಿ ಆ ಕಾರನ್ನು ಏರಿದ್ದರು. ಆನಂತರ ಅವರೆಲ್ಲ ಸೇರಿ ಅಶೋಕ್ ಅವರಿಗೆ ಬಲವಂತವಾಗಿ ಮುಖಗವಸು ಹಾಕಿದ್ದಾರೆ. ರೆಸಾರ್ಟಿಗೆ ತೆರಳಿದ ಅಪಹರಣಕಾರರು ತಲವಾರು ಪಿಸ್ತೂಲ್ ತೋರಿಸಿ ಜೀವ ಬೆದರಿಕೆಯೊಡ್ಡಿದ ಕುಮಾರ್ ಅವರ ಬಳಿ ಇದ್ದ 2 ಲಕ್ಷ ರೂ. ನಗದು ಹಾಗೂ ಮೊಬೈಲ್ ಫೋನ್ ವಾಚ್ ತೋರಿಸಿ 70ಲಕ್ಷ ರೂ. ಗೆ ಬೇಡಿಕೆ ಇಟ್ಟು ಜೀವ ಬೆದರಿಕೆ ಒಡ್ಡಿದ್ದರು.
ಆ ಬಳಿಕ ಹೆಚ್ಚಿನ ಹಣ ಡ್ರಾ ಮಾಡಲು ಬ್ಯಾಂಕಿಗೆ ಕರೆದುಕೊಂಡು ಹೋಗಿದ್ದರು. ಉಳಿದವರು ಬ್ಯಾಂಕಿನ ಹೊರಗಡೆ ಇದ್ದರು. ಬ್ಯಾಂಕಿನ ಒಳಗೆ ಹೋದ ಆಶೋಕ್ ಮ್ಯಾನೇಜರ್ ಚೇಂಬರ್ ಗೆ ತೆರಳಿ ನೇರವಾಗಿ ಕಳ್ಳ ಕಳ್ಳ ಎಂದು ಕೂಗಿದ್ದರು.