ಬಂಟ್ವಾಳ, ಜು 23 (DaijiworldNews/MS): ರಾಜ್ಯ ಕಾಂಗ್ರೆಸ್ ಕಾರ್ಮಿಕ ವಿಭಾಗ ಇಂಟಕ್ ಸಮಿತಿಯ ಉಪಾಧ್ಯಕ್ಷ ಹಾಗೂ ಕರ್ನಾಟಕ ಮುಸ್ಲಿಮ್ ಫೋರಂನ ಸ್ಥಾಪಕ ಅಧ್ಯಕ್ಷ, ಯುವ ಉದ್ಯಮಿ ಡಾ. ಕೆ.ಎಸ್.ಅಮೀರ್ ಅಹ್ಮದ್ ತುಂಬೆ (47) ನಿಧನರಾಗಿದ್ದಾರೆ.
ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅಮೀರ್ ತುಂಬೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದ ಮತ್ತಷ್ಟು ಉಲ್ಬಣಿಸಿದ ಹಿನ್ನೆಲೆಯಲ್ಲಿ ಅವರನ್ನು ಮತ್ತೊಂದು ಖಾಸಗಿ ಆಸ್ಪತ್ರೆಗೆ ವರ್ಗಾಯಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಕೊಂಚ ಚೇತರಿಕೆ ಕಂಡಿದ್ದ ಅವರ ಆರೋಗ್ಯದಲ್ಲಿ ಎರಡು ದಿನಗಳ ಹಿಂದೆ ಏರುಪೇರಾಗಿ ಗುರುವಾರ ರಾತ್ರಿ 1:30ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ, ತಂದೆ, ಸಹೋದರ ಸಹೋದರಿಯರು ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ