ಮಂಗಳೂರು, ಜು.23 (DaijiworldNews/HR): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಗುರುವಾರ ಮಳೆಯಾಗಿದ್ದು, ಮಂಗಳೂರು, ಉಡುಪಿ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಬಿಸಿಲಿನ ವಾತಾವರಣದೊಂದಿಗೆ ಸ್ವಲ್ಪ ಮಳೆಯಾಗಿದ್ದು, ಕೆಲವು ಪ್ರದೇಶಗಳಲ್ಲಿ ಜೋರಾದ ಗಾಳಿ ಬಂದಿರುವುದು ವರದಿಯಾಗಿದೆ.
ಹವಾಮಾನ ಇಲಾಖೆಯು ಶುಕ್ರವಾರ ಬೆಳಿಗ್ಗೆ ತನಕ ರೆಡ್ ಅಲರ್ಟ್ ಮತ್ತು ಜುಲೈ 24 ರಂದು ಬೆಳಿಗ್ಗೆ 8.30 ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಜುಲೈ 24 ರಿಂದ 27 ರವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಈ ಅವಧಿಯಲ್ಲಿ ತೀವ್ರ ಗಾಳಿಯೊಂದಿಗೆ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಕೊಡಗು ಜಿಲ್ಲೆಯಲ್ಲಿ ತೀವ್ರ ಗಾಳಿಯೊಂದಿಗೆ ಭಾರಿ ಮಳೆಯಾಗಿದ್ದು, ಇದು ವಿವಿಧ ಸ್ಥಳಗಳಲ್ಲಿ ಹಾನಿಯಾಗಿದೆ. ಕುಶಾಲ್ನಗರ ಮತ್ತು ಸಂಪಾಜೆ ನಡುವಿನ ಹೆದ್ದಾರಿಯಲ್ಲಿ ವಿವಿಧ ಸ್ಥಳಗಳಲ್ಲಿ ಭೂಕುಸಿತ ಸಂಭವಿಸಿದೆ. ಹಾನಿ ಸಂಭವಿಸಿದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಭೇಟಿ ನೀಡಿದರು.
ಮಡಿಕೇರಿ ತಾಲ್ಲೂಕಿನಲ್ಲಿ ಉತ್ತಮ ಮಳೆಯ ಕಾರಣ ನೀರಿನ ಮಟ್ಟ ಏರುತ್ತಿರುವುದರಿಂದ, ಅಪಾಯ ಇರುವ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಜಿಲ್ಲಾಡಳಿತ ಸೂಚಿಸಿದೆ.