ಉಡುಪಿ, ಜು.23 (DaijiworldNews/HR): ಕಾಂಗ್ರೆಸ್ ಮುಖಂಡ ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಚೇತರಿಕೆಗಾಗಿ ಇಂದು ಉಡುಪಿಯ ಮದರ್ ಆಪ್ ಸಾರೋಸ್ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು.
ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ್ಯ ವಂದನೀಯ ಡಾಕ್ಟರ್ ಜೆರಾಲ್ಡ್ ಐಸಾಕ್ ಲೋಬೋ ಪ್ರಾರ್ಥನೆಯನ್ನು ನೆರವೇರಿಸಿದರು.
ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕಿಡಾಗಿ ಕಾಂಗ್ರೆಸ್ ಮುಖಂಡರಾಧ ಆಸ್ಕರ್ ಫೆರ್ನಾಂಡಿಸ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಪ್ರಾರ್ಥನ ಕೂಟದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, "ಆಸ್ಕರ್ ಫೆರ್ನಾಂಡಿಸ್ ಅವರನ್ನು ಗುಣಪಡಿಸಲು ವೈದ್ಯರು ತಮ್ಮ ಶಕ್ತಿ ಮೀರಿ ಪ್ರಯತ್ನಗಳನ್ನು ಮಾಡುತಿದ್ದಾರೆ. ಆದರೆ ಅವರ ಪ್ರಯತ್ನದ ಜೊತೆಗೆ ದೈವಾನುಗ್ರಹ ಕೂಡಾ ಅವಶ್ಯಕವಾಗಿದೆ. ಈ ಕಾರಣದಿಂದಾಗಿ ಇಂದು ಚರ್ಚ್, ಮಸೀದಿ ಮತ್ತು ದೇವಸ್ಥಾನದಲ್ಲಿ ವಿಶೇಷ ಪುಜೆ ಮತ್ತು ಪ್ರಾರ್ಥನೆಗಳನ್ನು ನೆರವೇರಿಸಿದ್ದೇವೆ. ಆಸ್ಕರ್ ಫೆರ್ನಾಂಡಿಸ್ ಅವರಿಗೆ ದೀರ್ಘ ಕಾಲ ರಾಷ್ಟ್ರ ಮಟ್ಟದಲ್ಲಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿತ್ತು. ಅವರೊಬ್ಬ ಅಜಾತಶತ್ರು. ಅವರು ಶೀಘ್ರವಾಗಿ ಗುಣಮುಖ ಆಗಲಿ" ಎಂದು ಹಾರೈಸಿದರು.
ಇನ್ನು ಉಡುಪಿಯ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಕೂಡಾ ಪ್ರಾರ್ಥನಾ ಕೂಟಗಳು ನಡೆದವು. ಉದ್ಯಾವರದ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯ, ಪೊಲಿಪು ಜಾಮೀಯ ಮಸೀದಿ, ಕಾಪು ಜನಾರ್ದನ ದೇವಸ್ಥಾನ ಮತ್ತು ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ವಿಷೇಶ ಪೂಜೆ ಮತ್ತು ಪ್ರಾರ್ಥನೆಗಳು ನೆರವೇರಿದವು.
ಈ ಸಂಧರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ್ಯರಾದ ಪ್ರಖ್ಯಾತ್ ಶೆಟ್ಟಿ. ಕಾಂಗ್ರೆಸ್ ಮುಖಂಡರಾದ ವೆರೋನಿಕಾ ಕರ್ನೆಲಿಯೋ, ಸತೀಶ್ ಅಮಿನ್ ಪಡುಕೆರೆ, ರೋಶನಿ ಒಲಿವೆರಾ. ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.