ಮಂಗಳೂರು, ಜು. 23 (DaijiworldNews/SM): ಶಿರಾಡಿ ಘಾಟ್ ನ ದೋಣಿಗಾಲ್ ಬಳಿ ರಸ್ತೆ ಕುಸಿತಗೊಂಡಿರುವ ಹಿನ್ನೆಲೆಯಲ್ಲಿ ಹಾಗೂ ಚಾರ್ಮಾಡಿ ಘಾಟ್ ನ 5 ಹಾಗೂ ಆರನೇ ತಿರುವಿನಲ್ಲಿ ಕುಸಿತ ಉಂಟಾದ ಹಿನ್ನೆಲೆಯಲ್ಲಿ ರಾತ್ರಿ ವೇಳೆಯಲ್ಲಿ ವಾಹನಗಳ ಸಂಚಾರಕ್ಕೆ ನಿಷೇಧ ವಿಧಿ ಜಿಲ್ಲಾಡಳಿತ ಆದೇಶ ನೀಡಿದೆ.
ಶಿರಾಡಿಯ ಕುಸಿದ ಭಾಗದಲ್ಲಿ ದುರಸ್ತಿ ಕಾರ್ಯ ಪೂರ್ಣಗೊಂಡಿದೆ. ಸದ್ಯ ಲಘು ವಾಹನಗಳ ಸಂಚಾರಕ್ಕೆ ಅನುಮತಿ ಮಾಡಲಾಗಿದೆ. ಬೆಳಗ್ಗೆ 6ರಿಂದ ಸಂಜೆ 6ರ ತನಕ ಮಾತ್ರ ಸಂಚಾರಕ್ಕೆ ಅನುಮತಿಸಲಾಗಿದ್ದು, ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಕಾರು, ಜೀಪ್, ದ್ವಿಚಕ್ರ ವಾಹನಗಳು, ಮಿನಿ ಟೆಂಪೋ, ಸಾರಿಗೆ ಬಸ್ ಗಳಿಗೆ ಅವಕಾಶ ನೀಡಲಾಗಿದೆ. ಪ್ರಸ್ತುತ ಘನ ವಾಹನ ಸಂಚಾರಕ್ಕೆ ಅವಕಾಶವಿಲ್ಲ. ಟ್ಯಾಂಕರ್, ರಾಜಹಂಸ, ಐರಾವತ ಕಂಟೇನರ್ ಸಂಪೂರ್ಣ ನಿಷೇಧ ವಿಧಿಸಲಾಗಿದೆ.
ಇನ್ನು ಚಾರ್ಮಾಡಿಯಲ್ಲಿ ಕೂಡ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಲಾಗಿದ್ದು, ಹಗಲು ಹೊತ್ತಿನಲ್ಲಿ ಘನ ವಾಹನಸಂಚಾರಕ್ಕೆ ನಿರ್ಬಂಧವಿದೆ. ರಾತ್ರಿ ಏಳು ಗಂಟೆಯಿಂದ ಬೆಳಗ್ಗೆ 7 ಗಂಟೆಯ ತನಕ ವಾಹನ ಸಂಚಾರಕ್ಕೆ ನಿಷೇಧಿಸಲಾಗಿದೆ.