ಸುಬ್ರಹ್ಮಣ್ಯ, ಜು 24 (DaijiworldNews/PY): ಘಟ್ಟ ಪ್ರದೇಶದಲ್ಲಿ ಹಾಗೂ ಸುಬ್ರಹ್ಮಣ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ಕುಮಾರಧಾರ ಸ್ನಾನಘಟ್ಟ ಮತ್ತೆ ಮುಳುಗಡೆಯಾಗಿದೆ.
ನದಿಯಲ್ಲಿ ಕಡಿಮೆಯಾಗಿದ್ದ ನೀರು ಜುಲೈ 23ರ ಶುಕ್ರವಾರದಂದು ಏರಿಕೆಯಾದ ಪರಿಣಾಮ ಸ್ನಾನಘಟ್ಟ ಹಾಗೂ ಕಿಂಡಿ ಅಣೆಕಟ್ಟೆ ಸಂಪೂರ್ಣ ಮುಳುಗಡೆಯಾಗಿದೆ. ನದಿಯಲ್ಲಿ ನೀರಿನ ಹೆಚ್ಚುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ನದಿ ದಡದಲ್ಲಿ ಗೃಹರಕ್ಷಕ ದಳದ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಗುತ್ತಿಗಾರು ಸೇರಿದಂತೆ ಸುಬ್ರಹ್ಮಣ್ಯ, ಪಂಜ, ಏನೆಕಲ್ಲು, ಬಳ್ಪ, ಕೊಲ್ಲಮೊಗ್ರು, ಬಿಳಿನೆಲೆ, ಹರಿಹರ ಪಲ್ಲತ್ತಡ್ಕ, ಇಚ್ಲಂಪಾಡಿ, ಕಲ್ಲುಗುಡ್ಡೆ, ಕೊಣಾಜೆ ವ್ಯಾಪ್ತಿಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಹಳ್ಳ, ತೋಡುಗಳಲ್ಲಿ ತುಂಬಿ ಹರಿಯುತ್ತಿವೆ.