ಕಾಸರಗೋಡು, ಜು.24 (DaijiworldNews/HR): ತಮ್ಮನನ್ನು ಅಣ್ಣ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಶನಿವಾರ ಮಧ್ಯಾಹ್ನ ಸೀತಾಂಗೋಳಿಯ ಮುಗು ಎಂಬಲ್ಲಿ ನಡೆದಿದೆ.
ನಿಸಾರ್
ಕೊಲೆಗೀಡಾದವರನ್ನು ಮುಗು ಉರ್ಮಿಯ ಅಬ್ದುಲ್ಲ ಮುಸ್ಲಿಯಾರ್ ರವರ ಪುತ್ರ ನಿಸಾರ್ (29) ಎಂದು ಗುರುತಿಸಲಾಗಿದೆ.
ಸಹೋದರ ರಫೀಕ್ (31)ನನ್ನು ಬದಿಯಡ್ಕ ಠಾಣಾ ಪೊಲೀಸರುಬಂಧಿಸಿದ್ದಾರೆ.
ಗಂಭೀರ ಗಾಯಗೊಂಡ ನಿಸಾರ್ನನ್ನು ಕೂಡಲೇ ಕುಂಬಳೆಯ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.
ಇನ್ನು ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ. ಬದಿಯಡ್ಕ ಠಾಣಾ ಪೊಲೀಸರು ಘಟನಾ ಸ್ಥಳಕ್ಕಾಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.