ಉಡುಪಿ, ಜು. 27 (DaijiworldNews/SM): ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಬಸವರಾಜ್ ಬೊಮ್ಮಾಯಿ ಇದೀಗ ಸಿಎಂ ಆಗಿದ್ದು, ಜಿಲ್ಲೆಯಲ್ಲಿ ಜನರು ಸಂಭ್ರಮಾಚರಿಸುತ್ತಿದ್ದಾರೆ.
ಜಿಲ್ಲಾ ಬಿಜೆಪಿಯ ವತಿಯಿಂದ ನಗರದ ಸರ್ವಿಸ್ ಬಸ್ ನಿಲ್ದಾಣ ಬಳಿ ಸಂಭ್ರಮಾಚರಣೆ ನಡೆಯಿತು. ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಬಳಿಕ ಕಸ ಸ್ವಚ್ಛಗೊಳಿಸುವ ಮೂಲಕ ಸಮಾಜಕ್ಕೆ ಸಂದೇಶ ಸಾರಿದರು.
ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ನಗರ ಸಭಾ ಸದಸ್ಯರು ಸೇರಿದಂತೆ ಕಾರ್ಯಕರ್ತರು ಭಾಗಿಗಳಾಗಿದ್ದರು.