ವಿಟ್ಲ, ಜು 28 (DaijiworldNews/MS): ಆಟೋ ರಿಕ್ಷಾದಲ್ಲಿ ಗಾ೦ಜಾ ಸಾಗಾಟ ಮಾಡುತ್ತಿದ್ದಾಗ ಪೊಲೀಸರು ನಿಲ್ಲಿಸಲು ಮು೦ದಾದಾಗ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ಪಲ್ಟಿ ಹೊಡೆದಿದ್ದು ಈ ವೇಳೆ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದ ಘಟನೆ ವಿಟ್ಲ ಕಾಶಿಮಠದಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಸಜಿಪಮೂಡ ಗ್ರಾಮದ ಸುಭಾಶ್ ನಗರ ನಿವಾಸಿ ಅಸೀಫ್ ಯಾನೆ ಅಚಿ (28) ಸವಣೂರು ಗ್ರಾಮದ ಚಾಪಳ್ಳ ನಿವಾಸಿ ಫರಾಝ್ (23) ಬ೦ಧಿತ ಆರೋಪಿಗಳು.
ಪೊಲೀಸರು ವಾಹನ ತಪಾಸಣೆ ಮಾಡುತ್ತಿರುವಾಗ ಉಕ್ಕುಡ ಕಡೆಯಿಂದ ವಿಟ್ಲ ಪೇಟೆ ಕಡೆಗೆ ಒಂದು ಟೋ ರಿಕ್ಷಾವನ್ನು ಅದರ ಚಾಲಕ ಚಲಾಯಿಸಿಕೊಂಡು ಬರುವುದನ್ನು ಕಂಡ ಸಿಬ್ಬಂದಿಗಳು ಆಟೋ ರಿಕ್ಷಾವನ್ನು ಅದರ ಚಾಲಕನಿಗೆ ನಿಲ್ಲಿಸಲು ಸೂಚನೆ ನೀಡಿದಾಗ ರಿಕ್ಷಾ ಚಾಲಕನು ಒಮ್ಮೆಲೇ ಆಟೋ ರಿಕ್ಷಾವನ್ನು ತಿರುಗಿಸಿದ ಕಾರಣ ಆಟೋ ರಿಕ್ಷಾವು ಚಾಲಕನ ಹತೋಟಿ ತಪ್ಪಿ ಮಗುಚಿ ಬಿದ್ದಿದೆ. ಇವರ ರಕ್ಷಣೆಗೆ ಸಿಬ್ಬಂದಿಗಳು ಹೋದಾಗ ಸ್ಥಳದಿಂದ ಓಡಿ ಹೋಗಲು ಪುಯತ್ನಿಸಿದವರನ್ನುಸಿಬ್ಬಂದಿಗಳು ಹಿಡಿದುಕೊಂಡು ವಿಚಾರಣೆ ನಡೆಸಿದ್ದಾರೆ.
ಆಟೋ ರಿಕ್ಷಾದ ಚಾಲಕನ ಸೀಟಿನ ಅಡಿಯಲ್ಲಿದ್ದ ಒಂದು ಕಟ್ಟನ್ನು ತೆಗೆದು ಇದು ಗಾಂಜಾದ ಕಟ್ಟು ಎಂದು ತೋರಿಸಿ ಇದನ್ನು ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವುದರಿಂದ ತಿಳಿಸಿದರಿ೦ದ ಕೂಡಲೇ ವಾಹನವನ್ನು ಮತ್ತು ಸುಮಾರು 60,000 ರೂ.ಗಳ ಮೌಲ್ಯದ 2.060 ಕೆ.ಜಿ ಗಾಂಜಾ ಗಾ೦ಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ವಿಟ್ಲಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.