ಕಾರ್ಕಳ, ಜು 28 (DaijiworldNews/PY): ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಸವರಾಜ ಬೊಮ್ಮಾಯಿ ಅವರಿಗೆ ಕಾರ್ಕಳ ಬಿಜೆಪಿ ಅಭಿನಂದನೆ ಸಲ್ಲಿಸಿದೆ.
"ಬಸವರಾಜ ಬೊಮ್ಮಾಯಿ ಅವರು ನೂತನ ಸಿಎಂ ಆಗಿ ಅಧಿಕಾರವಹಿಸಿಕೊಂಡ ತಕ್ಷಣವೇ ಜನಪರ ಯೋಜನೆಗಳಿಗೆ ಚಾಲನೆ ನೀಡಲಾಗಿದ್ದು ರೈತರ ಶ್ರೇಯೋಭಿವೃದ್ಧಿಗಾಗಿ ರೈತರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಹೆಚ್ಚಿನ ಮೊತ್ತ ಮೀಸಲಿಟ್ಟಿರುವುದು ಆಶಾದಾಯಕವಾದ ಬೆಳವಣಿಗೆ. ಅದೇ ರೀತಿ ವೃದ್ಧಾಪ್ಯ ವೇತನ ಸಂಧ್ಯಾ ಸುರಕ್ಷಾ ದಿವ್ಯಾಂಗ ಚೇತನರ ವೇತನ ಹೆಚ್ಚು ಮಾಡಿರುವುದು ಬಡವರ ಬಗ್ಗೆ ಇರುವ ಕಾಳಜಿಯನ್ನು ಎತ್ತಿ ತೋರಿಸುತ್ತಿದೆ" ಕಾರ್ಕಳ ಬಿಜೆಪಿ ಅಧ್ಯಕ್ಷ ಮಹಾವೀರ ಹೆಗ್ಡೆ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.
"ಅಧಿಕಾರ ಚುಕ್ಕಾಣಿ ಹಿಡಿದ ಮೊದಲ ದಿನವೇ ಆಡಳಿತಯಂತ್ರದ ಚುರುಕು, ಆಡಳಿತದಲ್ಲಿ ಖರ್ಚುವೆಚ್ಚಗಳನ್ನು ಕಡಿಮೆ ಮಾಡುವುದು ಕರ್ನಾಟಕ ರಾಜ್ಯಕ್ಕೆ ಹೊಸ ಆಶಾಕಿರಣ ಒದಗಿಸಿದಂತಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಜನಪರ ಯೋಜನೆಗಳು ಬರಲಿದ್ದು, ರಾಜ್ಯ ಬಿಜೆಪಿ ಇನ್ನಷ್ಟು ಉತ್ತಮ ದಿಕ್ಕಿನೆಡೆಗೆ ಸಾಗಲಿದ್ದು, ಇನ್ನೊಮ್ಮೆ ಬಿಜೆಪಿಗೆ ಅಧಿಕಾರ ಸಿಗಲಿದೆ" ಎಂದು ಪ್ರಕಟಣೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.