ಬೆಳ್ತಂಗಡಿ, ಜು 29 (DaijiworldNews/MS): ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರದ ಆವರಣದಿಂದ ಅನ್ಯಮತೀಯ ವ್ಯಕ್ತಿಯೊಬ್ಬರು ಮಣ್ಣು ಪಡೆದಿರುವ ವಿಚಾರವಾಗಿ ದೇವಳದ ಸಿಸಿಟಿವಿಯಲ್ಲಿ ಸೆರೆಯಾಗಿ ಜು.೨೮ ರ ಬುಧವಾರ ಹಲವು ಊಹಾಪೋಹ ಉಂಟಾಗಿತ್ತು.
ಈ ಘಟನೆಯ ಬಗ್ಗೆ ಆಡಳಿತ ಮಂಡಳಿ ಠಾಣೆಗೆ ಮಾಹಿತಿ ನೀಡಿದ್ದರು. ಅದರಂತೆ ಪೊಲೀಸರು ಆತನನ್ನು ಗುರುತಿಸಿ ವಿಚಾರಣೆ ನಡೆಸಿದ್ದಾರೆ.
ತಾನು ದೃಷ್ಟಿದೋಷಕ್ಕೆ ಒಳಗಾಗಿದ್ದರಿಂದ ಜತೆಗೆ ಕುಟುಂಬದ ಸಮಸ್ಯೆಗಳು ಪರಿಹಾರವಾಗುತ್ತದೆ ಎಂದು ತಿಳಿಸಿದ್ದರಿಂದ ಪವಿತ್ರ ಕ್ಷೇತ್ರದ ಆವರಣದ ಮಣ್ಣು ನೀರನ್ನು ತೆಗೆದುಕೊಂಡು ಹೋಗಿದ್ದೇನೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ ಎಂದು ತಿಳಿದುಬಂದಿದೆ.