ಉಳ್ಳಾಲ, ಜು. 29 (DaijiworldNews/SM): ಬೈಕ್ ಸ್ಕೂಟರ್ ನಡುವೆ ಅಪಘಾತ ನಡೆದು ನಡೆದ ಅಪಘಾತವೊಂದರಲ್ಲಿ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಬಸ್ಸು ಚಲಿಸಿದ ಹಿನ್ನೆಲೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮುಡಿಪು ಬಳಿಯ ಮೂಳೂರು ಕ್ರಾಸ್ ಬಳಿಯಲ್ಲಿ ಬುಧವಾರ ನಡೆದಿದೆ.
ಇನ್ನು ಸ್ಕೂಟರ್ ಸವಾರರಿಬ್ಬರು ಗಾಯಗೊಂದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಮುಡಿಪು ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಚಲಿಸುತ್ತಿದ್ದ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು, ಆತನ ಮೇಲೆ ಹಿಂಬದಿಯಿಂದ ಬರುತ್ತಿದ್ದ ಬಸ್ ಚಲಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.