ಬಂಟ್ವಾಳ, ಜು. 29 (DaijiworldNews/SM): ಪ್ರಸಿದ್ಧ ಕ್ಷೇತ್ರವಾಗಿರುವ ಶ್ರೀ ಪಣೋಲಿಬೈಲು ಕ್ಷೇತ್ರದಲ್ಲಿ ಅಗೆಲು ಸೇವೆಗಳು ಪುನರಾರಂಭಗೊಳ್ಳಲಿದ್ದು, ಆಗಸ್ಟ್ 1ರಂದು ಅಗೆಲು ಸೇವೆಗಳು ಪುನರಾರಂಭಗೊಳ್ಳಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.
ಈ ಹಿಂದೆ ಕೊರೋನಾ ಲಾಕ್ ಡೌನ್ ಜಾರಿಯಾದ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಅಗೆಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಸರಕಾರ ಜಾರಿಗೊಳಿಸಿರುವ ಮಾರ್ಗಸೂಚಿಯಂತೆ ವಾರದ ಮೂರು ದಿನಗಳ ಕಾಲ ಸೇವೆ ಆರಂಭಗೊಳ್ಳಲಿದೆ. ಮಂಗಳವಾರ, ಶುಕ್ರವಾರ, ರವಿವಾರಗಳಂದು ಅಗೆಲು ಸೇವೆ ನಡೆಯಲಿದೆ.
ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಸೂಕ್ತ ಮುಂಜಾಗೃತಾ ಕ್ರಮಗಳೊಂದಿಗೆ ಸೇವೆ ಪುನರಾರಂಭಗೊಳಿಸಲು ನಿರ್ಧರಿಸಲಾಗಿದೆ.