ಮಂಗಳೂರು, ಜು 31 (DaijiworldNews/PY): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಪಾರ್ಕ್ ಬಳಿಯ ಅಕ್ರಮ ಗೂಡಂಗಡಿಗಳನ್ನು ಮನಪಾ ಹಾಗೂ ಕಂದಾಯ ಅಧಿಕಾರಿಗಳ ತಂಡ ಜುಲೈ 31ರ ಶನಿವಾರ ತೆರವುಗೊಳಿಸಿದೆ.
ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ಅವರ ಸೂಚನೆಯ ಮೇರೆಗೆ ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ಗೂಡಂಗಡಿಗಳನ್ನು ತೆರವು ಮಾಡಲಾಗಿದೆ. ಸಾರ್ವಜನಿಕರ ದೂರಿನ ಮೇರೆಗೆ, ಕದ್ರಿ ಪಾರ್ಕ್ ಮುಂಭಾಗದಲ್ಲಿದ್ದ 10ಕ್ಕೂ ಹೆಚ್ಚು ಅಕ್ರಮ ಗೂಡಂಗಡಿಗಳನ್ನು ಪೊಲೀಸ್ ರಕ್ಷಣೆಯಲ್ಲಿ ಅಧಿಕಾರಿಗಳು ತೆರವುಗೊಳಿಸಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆ ಡಿ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಫುಡ್ ಕೋರ್ಟ್ಗಳ ಕಾಮಗಾರಿ ನಡೆಸಲಾಗುತ್ತಿದ್ದು, ಈ ಹಿನ್ನೆಲೆ ಅಕ್ರಮ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆಸಸಾಗಿದೆ ಎನ್ನಲಾಗುತ್ತಿದೆ.
ಕಾರ್ಯಾಚರಣೆಯ ವೇಳೆ ಮನಪಾ ಕಂದಾಯ ಅಧಿಕಾರಿ ಪ್ರವೀಣ್ ಕರ್ಕೇರ ಹಾಗೂ ಮತ್ತಿತರರು ಇದ್ದರು.