ಪುತ್ತೂರು, ಆ 01 (DaijiworldNews/PY): ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ನಿವೃತ್ತ ಸೇನಾ ಸಿಬ್ಬಂದಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಬಂಧಿತ ಆರೋಪಿಯನ್ನು ಜಯಕುಮಾರ್ ಪೂಜಾರಿ ಎಂದು ಗುರುತಿಸಲಾಗಿದೆ. ಪೊಲಿಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪುತ್ತೂರಿನ ಡಿವೈಎಸ್ಪಿಗೆ ಆಶಾ ಅವರು ನೀಡಿದ ದೂರಿನಲ್ಲಿ, ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಶಬರಿಗಿರಿ ಮನೆ ನಿವಾಸಿ ಶಶಿಕುಮಾರ್ ಪಿಳ್ಳೆ ಅವರ ಪತ್ನಿ ಆಶಾ ಎಂಬವರಿಗೆ ಎಪ್ರಿಲ್ 15 ರಂದು ಆರೋಪಿ ಕಲ್ಲೆಸೆದು ಕಣ್ಣಿಗೆ ಗಾಯ ಮಾಡಿ, ಅವ್ಯಾಚ ಶಬ್ದಗಳಿಂದ ನಿಂದಿಸಿದ್ದು, ಜೀವ ಬೆದರಿಕೆ ಒಡ್ಡಿರುವುದಾಗಿ ತಿಳಿಸಿದ್ದಾರೆ.