ಮಂಗಳೂರು, ಆ. 01 (DaijiworldNews/SM): ಆಗಸ್ಟ್ 2ರಿಂದ ಮಂಗಳೂರು ವಿವಿ ಪದವಿ ಪರೀಕ್ಷೆಗಳು ಆರಂಭಗೊಳ್ಳುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಕಾಸರಗೋಡು ಗಡಿ ಭಾಗದ ವಿದ್ಯಾರ್ಥಿಗಳಿಗಾಗಿ ವಿಶೇಷ ಅವಕಾಶ ಕಲ್ಪಿಸಲಾಗಿದ್ದು, ನೆಗೆಟಿವ್ ವರದಿ ಇಲ್ಲದಿದ್ದರೂ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಸಂಚಾರ ನಡೆಸಬಹುದೆಂದು ಕೋಟ ಶ್ರೀನಿವಾಸ್ ಪೂಜಾರಿ ದೈಜಿವರ್ಲ್ಡ್ ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಕಾಸರಗೋಡಿನಿಂದ ದ.ಕ. ಜಿಲ್ಲೆಗೆ ಬರುವವರಿಗೆ ಆಗಸ್ಟ್ ೧ರಿಂದ ನೆಗೆಟಿವ್ ವರದಿ ಕಡ್ಡಾಯ ಎಂಬ ಆದೇಶವನ್ನು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ನೀಡಿದ್ದಾರೆ. ಇದರಿಂದಾಗಿ ಪರೀಕ್ಷೆ ಬರೆಯಲು ಆಗಮಿಸುವ ವಿದ್ಯಾರ್ಥಿಗಳಿಗೆ ಸಮಸ್ಯೆಯುಂಟಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಭಾಗದ ವಿದ್ಯಾರ್ಥಿಗಳು ನಿರಂತರ ಮನವಿ ಮಾಡಿದ್ದು, ಇದಕ್ಕೆ ಕೋಟ ಶ್ರೀನಿವಾಸ್ ಪೂಜಾರಿ ಸ್ಪಂದಿಸಿದ್ದಾರೆ. ದ.ಕ. ಜಿಲ್ಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸುವಂತೆ ಸೂಚಿಸಲಾಗಿದ್ದು, ಪರೀಕ್ಷ ಪ್ರವೇಶ ಪತ್ರ ತೋರಿಸಿ ಸಂಚಾರ ನಡೆಸಬಹುದೆಂದು ಸೂಚಿಸಲಾಗಿದೆ.
ಈ ಬಗ್ಗೆ ದೈಜಿವರ್ಲ್ಡ್ ವಾಹಿನಿ ಮೂಲಕ ಕೋಟ ಶ್ರೀನಿವಾಸ್ ಪೂಜಾರಿ ಸ್ಪಷ್ಟಪಡಿಸಿದ್ದಾರೆ.