ಕಾರ್ಕಳ, ಅ 01 (DaijiworldNews/MS): ಬಜಗೋಳಿ ಕಂಬಳ ಕ್ರೀಡಾಂಗಣದ ಮುಂಭಾಗದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಅಪಾಯಕಾರಿ ವಲಯವಾಗಿ ಮಾರ್ಪಟ್ಟಿದ್ದು, ದ್ವಿಚಕ್ರ ಮೋಟಾರ್ ಸವಾರರೊಬ್ಬರು ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ಬಂಜನಕ್ಯಾರ್ ಶೇಖರ್ ದೇವಾಡಿಗ (72) ಎಂಬವರು ಘಟನೆಯಲ್ಲಿ ಮೃತಪಟ್ಟವರು. ಕೂಕ್ರ ಎಂಬವರನ್ನು ಸವಸವಾರನ್ನಾಗಿ ಕುಳಿರಿಸಿ ಬಜಗೋಳಿಯಿಂದ ದಿಡಿಂಬಿರಿಯ ಕಡೆಗೆ ದ್ವಿಚಕ್ರ ವಾಹನವನ್ನು ಚಲಾಯಿಸಿ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಕಾರ್ಕಳ ಕಡೆಯಿಂದ ಬಜಗೋಳಿ ಕಡೆಗೆ ಹೋಗುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಸವಾರರಿಬ್ಬರು ಡಾಂಬರು ರಸ್ತೆ ಮೇಲೆ ಬಿದ್ದು ಗಾಯಗೊಂಡಿದ್ದರು. ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದ ಶೇಖರ್ ಮೃತಪಟ್ಟಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಕೇಸುದಾಖಲಾಗಿದೆ.