ಉಳ್ಳಾಲ, ಆ 02 (DaijiworldNews/SM): ಕೊರೊನಾ ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಆದೇಶದಂತೆ ಕೊರೊನಾ ನೆಗೆಟಿವ್ ವರದಿ ರಹಿತರಿಗೆ ಕರ್ನಾಟಕ ಗಡಿ ಪ್ರವೇಶಕ್ಕೆ ತಲಪಾಡಿ ಗಡಿಯಲ್ಲಿ ತುರ್ತು ಅಗತ್ಯ ವಾಹನಗಳನ್ನು ಹೊರತು ಪಡಿಸಿ ಇತರ ವಾಹನ ಸಂಚಾರಕ್ಕೆ ಮಂಗಳವಾರ ಸಂಪೂರ್ಣ ನಿರ್ಬಂಧ ಹೇರಲಾಗಿದ್ದು ಕೇರಳದಿಂದ ರಾಜ್ಯಕ್ಕೆ ಪ್ರವೇಶ ನಿಷೇಧವನ್ನು ಯುಡಿಎಫ್ ವಿರೋಧಿಸಿದ್ದು ಬುಧವಾರ ಸಂಜೆ ತನಕ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದು ಎಲ್ಡಿಎಫ್ ಹಾಗೂ ಸಂಯುಕ್ತ ಜನತಾ ದಳ ಸದಸ್ಯರು ಪ್ರತಿಭಟನೆ ನಡೆಸುವ ಮೂಲಕ ಕರ್ನಾಟಕದ ನಡೆಯನ್ನು ಅಸಮಂಜಸ ಎಂದು ದೂರಿದರು.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಕಂದಾಯ ಇಲಖೆ ಹಾಗೂ ಆರೋಗ್ಯ ಇಲಾಖೆ ಸಂಯುಕ್ತವಾಗಿ ಕಾರ್ಯಾಚರಣೆಗೆ ಇಳಿದಿದ್ದು 72ಗಂಟೆಯ ಒಳಗೆ ಮಾಡಿಸಿದ ಆರ್ ಟಿಪಿಸಿಆರ್ ವರದಿ ಇಲ್ಲದವರಿಗೆ ತಲಪಾಡಿ ಗಡಿಯಲ್ಲಿ ಪ್ರವೇಶ ನಿಷೇಸುವ ಕಾರ್ಯದಲ್ಲಿ ಯಾವುದೇ ಮುಲಾಜಿಲ್ಲದೆ ವಿದ್ಯಾರ್ಥಿಗಳು, ಉದ್ಯೋಗಿಗಳಿಗೆ ನೆಗೆಟಿವ್ ವರದಿ ಕಡ್ಡಾಯ ಎಂಬುದನ್ನು ಸಾರಿದರು.
ಒಂದು ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ಕ್ರಮವನ್ನು ಸಂಘಟನೆಯೊಂದರ ಸದಸ್ಯ ಅನ್ವರ್ ಎಂಬಾತ ವಿರೋಧಿಸಿದ್ದು , ಉಳ್ಳಾಲ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂರು. ಜಿಲ್ಲಾಕಾರಿ ಡಾ.ಕೆ.ವಿ. ರಾಜೇಂದ್ರ, ಮಂಗಳೂರು ಪೊಲೀಸ್ ಅಯುಕ್ತ ಕಮೀಷನರ್ ಶಶಿಕುಮಾರ್, ಸಹಾಯಕ ಆಯುಕ್ತ ಮದನ್ ಮೋಹನ್, ತಹಶೀಲ್ದಾರ್ ಗುರುಪ್ರಸಾದ್, ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಹರಿರಾಂ ಶಂಕರ್, ಎಸಿಪಿ ದಕ್ಷಿಣ ರಂಜಿತ್ ಕುಮಾರ್ ಬಂಡಾರ್, ಉಳ್ಳಾಲ ಇನ್ಸ್ಪೆಕ್ಟರ್ ಸಂದೀಪ್ ಜಿ.ಎಸ್, ಸೇರಿದಂತೆ ವಿವಿಧ ಇಲಾಖೆಯ ಪ್ರಮುಖರು ಗಡಿಯಲ್ಲಿ ಜಮಾಯಿಸಿದ್ದರು.