ಕಾಸರಗೋಡು, ಆ.03 (DaijiworldNews/HR): ನ್ಯಾಯಾಂಗ ಬಂಧನದಲ್ಲಿದ್ದ ಅಬಕಾರಿ ಪ್ರಕರಣದ ಆರೋಪಿ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರನ್ನು ಬೆಳ್ಳೂರು ನಾಟೆಕಲ್ನ ಕರುಣಾಕರ (43) ಎಂದು ಗುರುತಿಸಲಾಗಿದೆ.
ಜುಲೈ19 ರಂದು ವ್ಯಾನ್ನಲ್ಲಿ ಮದ್ಯ ಸಾಗಾಟ ಮಾಡುತ್ತಿದ್ದಾಗ ಬದಿಯಡ್ಕ ಅಬಕಾರಿ ಅಧಿಕಾರಿಗಳು ಕರುಣಾಕರನನ್ನು ಬಂಧಿಸಿ ಬಳಿಕ ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿತ್ತು. ಕಾಞ೦ಗಾಡ್ ಜೈಲಿನಲ್ಲಿರಿಸಲಾಗಿತ್ತು.
ಇನ್ನು ಕಿಡ್ನಿ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕರುಣಾಕರ ಕೆಲ ದಿನಗಳಿಂದ ಗಂಭೀರ ಸ್ಥಿತಿಗೆ ತಲಪಿದ್ದು ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು . ಈ ನಡುವೆ ಅಬಕಾರಿ ಅಧಿಕಾರಿಗಳ ದೌರ್ಜನ್ಯ ನಡೆಸಿದ್ದು, ಇದರಿಂದ ಆರೋಗ್ಯ ಸ್ಥಿತಿ ಹದೆಗೆಟ್ಟು ಮೃತಪಟ್ಟಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ.
ಕಣ್ಣೂರು ಸರಕಾರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಮೆಜಿಸ್ಟ್ರೇಟರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ.