ಮಂಗಳೂರು, ಆ 04 (DaijiworldNews/PY): ಸಿಎಂ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ ಲಭಿಸಲಿದೆ ಎನ್ನಲಾಗುತ್ತಿದೆ.
ನೂತನ ಸಚಿವರ ಪಟ್ಟಿಯನ್ನು ಇಂದು ಘೋಷಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೇ, ಇದೀಗ ಸಂಪುಟ ವಿಸ್ರಣೆ ಬಗ್ಗೆ ಕುತೂಹಲ ಹೆಚ್ಚಾಗಿಗೆ
ಸಂಪುಟದಲ್ಲಿ ಕೋಟ ಶ್ರೀನಿವಾಸ್ ಪೂಜಾರಿ, ಕಾರ್ಕಳ ಶಾಸಕ ಸುನಿಲ್ ಕುಮಾರ್, ಸುಳ್ಯ ಶಾಸಕ ಎಸ್ ಅಂಗಾರ ಅವರಿಗೆ ಸಚಿವ ಸ್ಥಾನ ಖಚಿತವಾಗಿದೆ ಎನ್ನಲಾಗಿದೆ.
ರಾಜ ಭವನದಲ್ಲಿ ಇಂದು ಮಧ್ಯಾಹ್ನ 2.15ಕ್ಕೆ ಗಾನಿನ ಮನೆಯಲ್ಲಿ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ರಾಜಭವನದಿಂದ 11.30ರ ಒಳಗೆ ನೂತನ ಸಚಿವ ಪಟ್ಟಿ ಅಧಿಕೃತವಾಗಿ ಬಿಡುಗೆಯಾಗಲಿದೆ.
"ಸಚಿವ ಸಂಪುಟ ರಚನೆಗೆ ವರಿಷ್ಠರು ಅನುಮತಿ ನೀಡಿದ್ದು, ಹೈಕಮಾಂಡ್ ಜೊತೆ ಚರ್ಚೆಯೂ ನಡೆದಿದೆ. ಅಲ್ಲದೇ ನೂತನ ಸಚಿವ ಇಂದು ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ" ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.