ಕಾಸರಗೋಡು, ಆ 04 (DaijiworldNews/MS):ಕೇರಳದಲ್ಲಿ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದ್ದು , ವಾರಾಂತ್ಯ ಸಂಪೂರ್ಣ ಲಾಕ್ ಡೌನ್ ನ್ನು ಭಾನುವಾರಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಎಲ್ಲಾ ವ್ಯಾಪಾರ ಮಳಿಗೆಗಳನ್ನು ಸೋಮವಾರದಿಂದ ಶನಿವಾರ ತನಕ ಬೆಳಿಗ್ಗೆ 7 ರಿಂದ ರಾತ್ರಿ 9 ರ ತನಕ ತೆರೆಯಲು ಅವಕಾಶ ನೀಡಲಾಗಿದೆ.
ಸಾಂದರ್ಭಿಕ ಚಿತ್ರ
ಸ್ವಾತಂತ್ರ್ಯ ದಿನವಾದ ಆಗಸ್ಟ್ 15 ರಂದು ಹಾಗೂ ಓಣಂ ಹಿನ್ನಲೆಯಲ್ಲಿ ಆಗಸ್ಟ್ 22 ರಂದು ಭಾನುವಾರ ಆಗಿರುವುದರಿಂದ ಅಂದು ವಾರಾಂತ್ಯ ಲಾಕ್ ಡೌನ್ ನಿಂದ ವಿನಾಯಿತಿ ನೀಡ ಲಾಗಿದ್ದು , ವ್ಯಾಪಾರ ಮಳಿಗೆಗಳನ್ನು ತೆರೆಯಬಹುದು. ಈ ಹಿಂದೆ ಟೆಸ್ಟ್ ಪಾಸಿಟಿವಿಟಿ ಆಧಾರದಲ್ಲಿ ಜಾರಿಗೆ ತರಲಾಗುತ್ತಿದ್ದ ನಿಯಂತ್ರಣಗಳನ್ನು ಹಿಂತೆಗೆದುಕೊಂಡಿದ್ದು , ವಾರಕ್ಕೊಮ್ಮೆ ಸೋಂಕು ಹರಡುವಿಕೆ ಆಧಾರದ ದಲ್ಲಿ ಸ್ಥಳೀಯ ಮಟ್ಟದ ಲ್ಲಿ ನಿಯಂತ್ರಣ ಜಾರಿಗೆ ತರಲಾಗುವುದು ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜೋರ್ಜ್ ವಿಧಾನಸಭೆಯಲ್ಲಿ ಮಾಹಿತಿ ನೀಡಿದರು.
ಪ್ರಾರ್ಥನಾ ಮಂದಿರಗಳಲ್ಲಿ ವಿಸ್ತೀರ್ಣದ ಆಧಾರದಲ್ಲಿ ಭಕ್ತರಿಗೆ ಪ್ರವೇಶ ನೀಡಲಾಗುವುದು . ಒಂದು ಬಾರಿ 40 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ. ವಿವಾಹ ಹಾಗೂ ಅಂತ್ಯಕ್ರಿಯೆ ಹಾಗೂ ಮರಣಾನಂತರ ಕಾರ್ಯಕ್ರಮಕ್ಕೆ ತಲಾ 20 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಒಂದು ವಾರದಲ್ಲಿ 1000 ಮಂದಿಯಲ್ಲಿ 10 ಮಂದಿಗೆ ಪಾಸಿಟಿವ್ ಕಂಡುಬಂದಲ್ಲಿ ಆ ಪ್ರದೇಶದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಗೆ ತರಲಾಗುವುದು . ಉಳಿದೆಡೆ ವಾರದ ಆರು ದಿನ ವ್ಯಾಪಾರ ಮಳಿಗೆ ತೆರೆಯಬಹುದು. ಆದರೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಕ್ಕೆ ಅವಕಾಶ ಇಲ್ಲ . ಹಬ್ಬ ದ ದಿನಗಳಲ್ಲಿ ಸಾಮಾಜಿಕ ಅಂತರ ಕಾಯ್ದು ಕೋವಿಡ್ ಮಾನದಂಡ ಪಾಲಿಸಬೇಕು. ವ್ಯಾಪಾರ ಮಳಿಗೆಗೆ ಮೊದಲ ಡೋಸ್ ವ್ಯಾಕ್ಸಿನ್ ಅಥವಾ ಕೋವಿಡ್ ನೆಗಟಿವ್ ಸರ್ಟಿಫಿಕೇಟ್ ಹೊಂದಿದವರು. ಒಂದು ತಿಂಗಳ ಹಿಂದೆ ಕೋವಿಡ್ ನಿಂದ ಗುಣಮುಖರಾದ ಗ್ರಾಹಕರು ತೆರಳುವುದು ಹೆಚ್ಚು ಉತ್ತಮ . 60 ವರ್ಷ ದಾಟಿದ ಎಲ್ಲರಿಗೂ ಲಭ್ಯತೆಯಂತೆ ವ್ಯಾಕ್ಸಿನ್ ನೀಡಲಾಗುವುದು . ಹಾಸಿಗೆ ಹಿಡಿದ ರೋಗಿಗಳಿಗೆ ಮನೆಗಳಿಗೆ ತಲುಪಿ ವ್ಯಾಕ್ಸಿನ್ ನೀಡಲಾಗುವುದು ಎಂದು ಸಚಿವರು ಸ್ಪಷ್ಪಡಿಸಿದರು