ಮಂಗಳೂರು, ಆ 04 (DaijiworldNews/SM): ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕೆಲಸಗಳ ಪರಿಶೀಲನೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಚಿವರು ಗಳಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿದ್ದಾರೆ.
ಅದಂರಂತೆ ದ.ಕ. ಜಿಲ್ಲೆಯ ಪರಿಗತಿಗಳನ್ನು ಪರಿಶೀಲನೆ ನಡೆಸಲು ಸಚಿವ ಎಸ್. ಅಂಗಾರ ಅವರನ್ನು ನೇಮಕ ಮಾಡಲಾಗಿದೆ. ಉಡುಪಿ ಜಿಲ್ಲೆಯ ನೆರೆ ಪೆರಿಸ್ಥಿತಿಗತಿಗಳು ಹಾಗೂ ಕೋವಿಡ್ ನಿರ್ವಹಣೆ ಪರೀಕ್ಷಿಸಲು ಸಚಿವ ಸುನಿಲ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಕೊಡಗು ಜಿಲ್ಲೆಯ ಜವಾಬ್ದಾರಿ ನೀಡಲಾಗಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ನೀಡಲಾಗಿದ್ದು, ಮುಂದಿನ ಆದೇಶದವರೆಗೆ ಈ ಜವಾಬ್ದಾರಿ ಮುಂದುವರೆಯಲಿದೆ.