ಬಂಟ್ವಾಳ, ಆ. 05 (DaijiworldNews/SM): ಕೋವಿಡ್ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಈ ಬಾರಿಯೂ ನರಹರಿ ಪರ್ವತ ಕ್ಷೇತ್ರದಲ್ಲಿ ಆಗಸ್ಟ್ ೮ರಂದು ಆಟಿ ಅಮಾವಾಸ್ಯೆಯ ತೀರ್ಥಸ್ನಾನಕ್ಕೆ ಅವಕಾಶವಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.
ನರಹರಿ ಪರ್ವತ ಕ್ಷೇತ್ರವು ಆಟಿ ಅಮಾವಾಸ್ಯೆಯ ತೀರ್ಥಸ್ನಾನಕ್ಕೆ ಪ್ರಸಿದ್ಧಿ ಪಡೆದಿದೆ. ಪ್ರತಿವರ್ಷ ಈ ದಿನ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ತೀರ್ಥಸ್ನಾನಗೈದು ದೇವರಿಗೆ ಪ್ರಾರ್ಥನೆ ಸಲ್ಲಿಸುವುದು ಸಂಪ್ರದಾಯವಾಗಿದೆ.
ಜಿಲ್ಲಾಡಳಿತದ ಸೂಚನೆಯಂತೆ ಕ್ಷೇತ್ರದ ಆಡಳಿತ ಮಂಡಳಿಯು ತೀರ್ಥಸ್ನಾನಕ್ಕೆ ಅವಕಾಶವಿಲ್ಲ ಎಂದು ತೀರ್ಮಾನಿಸಿದ್ದು, ಭಕ್ತರು ಸಹಕರಿಸುವಂತೆ ದೇವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿಕೊಂಡಿದೆ.