ಮಂಗಳೂರು, ಆ. 05 (DaijiworldNews/SM): ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಸ್ವಾಮಿ ಕೊರಗಜ್ಜ ದೈವದ ಪೋಟೋ ಎಡಿಟ್ ಮಾಡಿ ಹರಿಯ ಬಿಟ್ಟಿದ್ದು, ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಕಿಡಿಗೇಡಿಗಳು ಸ್ವಾಮಿ ಕೊರಗಜ್ಜ ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಆರೋಪಿಯನ್ನು ಶೀಘ್ರವಾಗಿ ಬಂಧಿಸಿ, ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಗಳು ಕೇಳಿಬರಲಾರಂಭಿಸಿವೆ.
ಈ ಬಗ್ಗೆ ಈಗಾಗಲೇ ಹಿಂದೂ ಜಾಗರಣಾ ವೇದಿಕೆ ಮಂಗಳೂರಿನ ಬಜ್ಪೆ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಾನೂನು ರೀತಿಯ ಕ್ರಮ ಜರಗಿಸುವಂತೆ ಒತ್ತಾಯಿಸಿದೆ.