ಮಂಗಳೂರು, ಆ 07 (DaijiworldNews/PY): ದೈವ ದೇವರುಗಳನ್ನು ಅಶ್ಲೀಲವಾಗಿ ಚಿತ್ರಿ ಅವಹೇಳನ ಮಾಡಿರುವ ಕಿಡಿಗೇಡಿಗಳ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.
ಸಾಂದರ್ಭಿಕ ಚಿತ್ರ
ಕರಾವಳಿಯ ಅತೀ ಹೆಚ್ಚು ಜನರು ಆರಾಧನೆ ಮಾಡುವ ಕೊರಗಜ್ಜ ದೈವದ ಬಗ್ಗೆ ಕಿಡಿಗೇಡಿಗಳು ಅಶ್ಲೀಲವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದು, ಕಿಡಿಗೇಡಿಗಳನ್ನು ಬಂಧಿಸುವಂತೆ ವಿಹೆಚ್ಪಿ ಬಜರಂಗದಳ ಆಗ್ರಹಿಸಿದೆ.
ಕೊರಗಜ್ಜ ದೈವದ ಬಗ್ಗೆ ಅಶ್ಲೀಲವಾಗಿ ಚಿತ್ರಿಸಿ, ವಿದೇಶಿ ನಂಬರ್ ಉಪಯೋಗಿಸಿ ವಾಟ್ಸಲ್ನಲ್ಲಿ ವೈರಲ್ ಮಾಡಿದ್ದಾರೆ ಎನ್ನಲಾಗಿದೆ.
ಕಿಡಿಗೇಡಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ವಿಹೆಚ್ಪಿ ಬಜರಂಗದಳ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ.