ಸುಳ್ಯ, ಆ.08 (DaijiworldNews/HR): ಸುಳ್ಯ ತಾಲ್ಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ಕೆರೆಗೆ ಬಿದ್ದ ಮಗುವನ್ನು ರಕ್ಷಿಸಲು ಹೋದ ತಾಯಿ ಕೂಡ ಮೃತಪಟ್ಟ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಮೃತರನ್ನು ಕೆಮ್ರಾಜೆ ಗ್ರಾಮದ ಮಾಪಲಕಜೆಯ ಸಂಗೀತಾ ಮತ್ತು ಆಕೆಯ ಮಗು ಎಂದು ಗುರುತಿಸಲಾಗಿದೆ.
ಮಗುವು ತೋಟದಲ್ಲಿನ ಕೆರೆಯ ಬಳಿ ಕಾಲು ಜಾರಿ ಬಿದ್ದಾಗ ರಕ್ಷಿಸಲು ಸಂಗೀತಾ ಕೂಡ ಕೆರೆಗೆ ಹಾರಿದ್ದು, ಈಜು ಬಾರದ ಕಾರಣ ಮಗುವಿನೊಂದಿಗೆ ತಾಯಿಯೂ ಮೃತಪಟ್ಟಿದ್ದಾರೆ.
ಇನ್ನು ಸಂಗೀತಾ ಅವರ ಮೃತದೇಹ ಮೇಲೆತ್ತಲಾಗಿದ್ದು, ಮಗುವಿನ ಮೃತದೇಹವನ್ನು ತೆಗೆಯುವ ಪ್ರಯತ್ನ ನಡೆಯುತ್ತಿದೆ.
ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.