ಸುಬ್ರಹ್ಮಣ್ಯ, ಆ 09 (DaijiworldNews/MS): ಅಪ್ರಾಪ್ತ ವಯಸ್ಸಿನ ಶಾಲಾ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಬೆದರಿಕೆ ಒಡ್ಡಿದ್ದ ಆರೋಪದಡಿ ಸ್ಥಳೀಯ ಶಿಕ್ಷಣ ಸಂಸ್ಥೆಯ ಪ್ರೌಢಶಾಲಾ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ವಿರುದ್ದ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿ ಬಂಧಿಸಿದ ಘಟನೆ ಆ.08 ರ ಭಾನುವಾರ ನಡೆದಿದೆ.
ಶಿಕ್ಷಕ ಗುರುರಾಜ್ ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡು ಮೊಬೈಲ್ ನಲ್ಲಿ ಫೋಟೋ ತೆಗೆಯುತ್ತಿದ್ದ ಎನ್ನಲಾಗಿದೆ. ಕಳೆದ ಹಲವು ಸಮಯದಿಂದ ಹಲವು ಬಾರಿ ಮನೆಗೆ ಬರುವಂತೆ ಬರ ಹೇಳಿ ದೌರ್ಜನ್ಯ ಎಸಗಿದ್ದ ಫೋಟೋ ತೋರಿಸಿ ಹಣ ತರುವಂತೆ ಬೆದರಿಸಿ ಪಡೆದುಕೊಂಡಿದ್ದಾನೆ. ಇದಕ್ಕೆ ಆತನ ಪತ್ನಿ ನೆರವು ನೀಡುತ್ತಿದ್ದರು ಎಂದು ವಿದ್ಯಾರ್ಥಿನಿಯ ತಾಯಿ ನಾಡಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ದೂರಿನ ಆಧಾರದಲ್ಲಿ ಗುರುರಾಜು ಬಂಧಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
ಆರೋಪಿಯನ್ನು ಪುತ್ತೂರು ಮ್ಯಾಜಿಸ್ಟ್ರೇಟ್ ಗೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ