ಪುತ್ತೂರು, ಆ. 10 (DaijiworldNews/SM): ಮನೆಯ ಸಮೀಪದ ಮರದಲ್ಲಿ ಜೀಗುಜ್ಜೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಅವಘಡವುಂಟಾಗಿ ಬಿಜೆಪಿ ನಾಯಕಿ ತಾಲೂಕು ಪಂಚಾಯತ್ ಮಾಜಿ ಸದಸ್ಯೆಯ ಪತಿ ನಿಧನರಾದ ಘಟನೆ ಆ.10ರಂದು ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಒತ್ತೆಮುಂಡೂರು ನಿವಾಸಿ ಕೃಷ್ಣಪ್ಪ ಗೌಡ ಮೃತ ದುರ್ದೈವಿ.
ಇವರು ಮನೆಯ ಸಮೀಪದ ಮರದಲ್ಲಿ ಜೀಗುಜ್ಜೆ ಕೊಯ್ಯಲು ಕೊಕ್ಕೆ ಹಿಡಿದುಕೊಂಡು ಹೋಗುವಾಗ ವಿದ್ಯುತ್ ತಂತಿಗೆ ತಾಗಿದೆ. ಈ ವೇಳೆ ವಿದ್ಯುತ್ ಪ್ರವಹಿಸಿ ಅವಘಡ ಸಂಭವಿಸಿದೆ. ವಿದ್ಯುತ್ ಶಾಕ್ ಹೊಡೆದ ಕೂಡಲೇ ಕೃಷ್ಣಪ್ಪರವರು ಸ್ಥಳದಲ್ಲೇ ಬಿದ್ದಿದ್ದಾರೆ. ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದ್ದು ಆದರೆ ಆದಾಗಲೇ ಕೊನೆಯುಸಿರೆಳೆದಿದ್ದಾರೆ.
ಇವರ ಪತ್ನಿ ಯಶೋಧ ಪುತ್ತೂರು ತಾಲೂಕು ಪಂಚಾಯತ್ ಸದಸ್ಯೆಯಾಗಿದ್ದರು, ಪ್ರಸ್ತುತ ಬಿಜೆಪಿಯ ಮಹಿಳಾ ಮೋರ್ಚಾ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಮಹಿಳಾ ವಿವಿದೋದ್ದೇಶ ಸಹಕಾರಿ ಸಂಘದ ನಿರ್ದೇಶಕಿಯಾಗಿಯೂ ಕಾರ್ಯನಿರ್ವಹಿಸುತಿದ್ದಾರೆ.
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.