ವೇಣೂರು (DaijiworldNews/MS): ಎರಡು ವರ್ಷದ ಹೆಣ್ಣು ಮಗು ನಾಪತ್ತೆಯಾಗಿರುವ ಘಟನೆ ಮಂಗಳವಾರ ಬಳಿಕ ನೋಡಿ ತಾಲೂಕಿನ ಸುಲಿಕೆರೆ ಗ್ರಾಮದಲ್ಲಿ ನಡೆದಿದೆ ತಡರಾತ್ರಿಯವರೆಗೂ ಮಗುವಿಗಾಗಿ ಶೋಧಕಾರ್ಯ ಮುಂದುವರೆದಿದೆ.
ಜಂತಿ ಗೂಳಿಯ ಪರಾರಿ ನಿವಾಸಿ ಸಂಜೀವ ಶೆಟ್ಟಿ ಅವರ ಪುತ್ರಿ ಸುಚಿತ್ರ ಮತ್ತು ಸುಭಾಷ್ ದಂಪತಿಯು ತಮ್ಮ ಎರಡು ವರ್ಷದ ಹೆಣ್ಣು ಮಗುವಿನೊಂದಿಗೆ ಸುಲ್ಕೇರಿ ಯ ತವರು ಮನೆಯಲ್ಲಿ ವಾಸವಿದ್ದರು.
ಮಂಗಳವಾರ ಮಧ್ಯಾಹ್ನ ಸುಚಿತ್ರಾ ಅವರು ಮಗುವನ್ನು ಅಜ್ಜನೊಂದಿಗೆ ಮನೆಯಲ್ಲಿ ಬಿಟ್ಟು ತಾಯಿಯೊಂದಿಗೆ ಹುಲ್ಲು ತರಲು ಎಂದು ಸನಿಹದ ತೋಟಕ್ಕೆ ಹೋಗಿದ್ದರು ಎನ್ನಲಾಗಿದೆ
ಹಿಂತಿರುಗಿ ಬರುವಷ್ಟರಲ್ಲಿ ಮಗು ಕಾಣಿಸದೆ ಇರುವುದನ್ನು ಕಂಡು ಹುಡುಕಾಟ ನಡೆಸಿದ್ದು ಮಗುವಿನ ಸುಳಿವು ಪತ್ತೆಯಾಗಿಲ್ಲ
ಮನೆಯಿಂದ 100 ಮೀಟರ್ ಅಂತರದಲ್ಲಿ ಹೊಳೆಯೊಂದು ಹರಿಯುತ್ತಿದ್ದು ಮಗು ಆ ಕಡೆಗೆ ಏನಾದರೂ ಹೋಗಿರಬಹುದೆ ಎನ್ನುವ ಶಂಕೆ ಮೂಡಿದೆ.
ಸ್ಥಳೀಯರು , ಆಗ್ನಿಶಾಮಕ ಪೊಲೀಸರು ಸ್ಥಳೀಯ ಪ್ರದೇಶ ಹಾಗೂ ಹೊಳೆಯಲ್ಲಿ ಶೋಧಿಸಿದರೂ ಮಗು ಪತ್ತೆಯಾಗಿಲ್ಲ.