ಕಾರ್ಕಳ, ಆ.11 (DaijiworldNews/HR): ಮಾಜಿ ಮುಖ್ಯಮಂತ್ರಿ ಡಾ.ಎಂ. ವೀರಪ್ಪ ಮೊಯಿಲಿಯವರ ನಿರ್ದೇಶನದಂತೆ, ಪುರಸಭಾ ಸದಸ್ಯ ಶುಭದ ರಾವ್ ಅವರನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರರಾಗಿ ನೇಮಕ ಮಾಡಲಾಗಿದೆ.
ಈ ಹಿಂದೆ ಬ್ಲಾಕ್ ವಕ್ತಾರರಾಗಿದ್ದ ಬಿಪಿನ್ಚಂದ್ರ ಪಾಲ್ ನಕ್ರೆ ಅವರು ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಪದೋನ್ನತಿ ಹೊಂದಿದ್ದು, ಸದ್ರಿ ತೆರವಾಗಿದ್ದ ಹುದ್ದೆಗೆ ಶುಭದ ರಾವ್ ನೇಮಕ ಮಾಡಲಾಗಿದೆ.
ಇನ್ನು ಈ ಬಗ್ಗೆ ಕಾರ್ಕಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸದಾಶಿವ ದೇವಾಡಿಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.