ಮಂಗಳೂರು, ಆ. 11 (DaijiworldNews/SM): ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇದೇ ಆ.12 ಹಾಗೂ 13ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಅವರು ಕೈಗೊಂಡಿರುವ ಪ್ರವಾಸ ಕಾರ್ಯಕ್ರಮಗಳ ವಿವರ ಇಂತಿದೆ. ಬೆಳಿಗ್ಗೆ 9.50ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಡುವ ಅವರು 10.50 ಮಂಗಳೂರಿನ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 11.30ಕ್ಕೆ ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಕುರಿತಂತೆ ಜಿಲ್ಲಾಡಳಿತದೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ಅವರು ಮಧ್ಯಾಹ್ನ 2.30ಕ್ಕೆ ಮಂಗಳೂರಿನಿಂದ ನಿರ್ಗಮಿಸಿ ರಸ್ತೆ ಮಾರ್ಗವಾಗಿ 3.30ಕ್ಕೆ ಉಡುಪಿಗೆ ತೆರಳುವರು. ಸಂಜೆ 7 ಗಂಟೆಗೆ ಉಡುಪಿಯಿಂದ ನಿರ್ಗಮಿಸಿ, ರಸ್ತೆ ಮಾರ್ಗವಾಗಿ 8 ಗಂಟೆಗೆ ಮಂಗಳೂರಿಗೆ ಆಗಮಿಸಿ, ಇಲ್ಲಿಯೇ ವಾಸ್ತವ್ಯ ಮಾಡುವರು. ಆ.13ರ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಗಡಿಭಾಗದ ಚೆಕ್ಪೋಸ್ಟ್ಗಳಿಗೆ ಭೇಟಿ ನೀಡುವರು. 10.30ಕ್ಕೆ ಮಂಗಳೂರಿಗೆ ರಸ್ತೆ ಮೂಲಕ ನಿರ್ಗಮಿಸಿ, 10.50 ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.