ಮಂಗಳೂರು, ಆ 13 (DaijiworldNews/PY): ಇಂದು ನಾಡಿನೆಲ್ಲೆಡೆ ನಾಗರಪಂಚಮಿ ಹಬ್ಬದ ಸಂಭ್ರಮ. ಆದರೆ, ಕೊರೊನಾ ಸಾಂಕ್ರಾಮಿಕ ರೋಗ ನಾಗರಪಂಚಮಿ ಆಚರಣೆಗೂ ಅಡ್ಡಿಯಾಗಿದೆ. ಈ ನಡುವೆ ಎಲ್ಲಾ ಪ್ರಸಿದ್ಧ ದೇವಾಲಯಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಂಡು ಸರಳವಾಗಿ ನಾಗರಪಂಚಮಿ ಆಚರಿಸಲಾಗುತ್ತಿದೆ.
ದೇವಸ್ಥಾನಗಳಿಗೆ ಪ್ರವೇಶ ನಿರ್ಬಂಧ ಹಿನ್ನೆಲೆ ಭಕ್ತಾಧಿಗಳು ನಾಗನಿಗೆ ಸೀಯಾಳ, ಪಿಂಗಾರ, ಹೂ-ಹಣ್ಣುಗಳನ್ನು ಹೊರಗಿನಿಂದಲೇ ಸಮರ್ಪಿಸುತ್ತಿರುವ ದೃಶ್ಯ ಸಾಮಾನ್ಯವಾಗಿದೆ.
ಮಂಗಳೂರಿನ ಇತಿಹಾಸ ಪ್ರಸಿದ್ದ ಶರವು ದೇವಾಲಯದಲ್ಲಿ ಸರಕಾರದ ಮಾರ್ಗ ಸೂಚಿಯಂತೆ ಆ.13ರಂದು ನಾಗರಪಂಚಮಿ ಹಬ್ಬವನ್ನು ಆಚರಿಸಲಾಯಿತು.
ಶರವು ದೇವಾಲಯದ ಹತ್ತಿರದಲ್ಲಿದದ ಉಮಾಮಹೇಶ್ವರ ದೇವಸ್ಥಾನದಲ್ಲಿ ಭಕ್ತಾಧಿಗಳು ಬೆರಳೆಣಿಕೆಯಲ್ಲಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ನಾಗರಪಂಚಮಿ ಆಚರಿಸಿದರು.