ಪುತ್ತೂರು, ಆ 15 (DaijiworldNews/PY): ಕಬಕ ಗ್ರಾ.ಪಂಚಾಯತ್ನ ಸ್ವಾತಂತ್ರ್ಯ ರಥಕ್ಕೆ ಎಸ್ಡಿಪಿಐ ಕಾರ್ಯಕರ್ತರು ತಡೆ ಒಡ್ಡಿದ ಘಟನೆ ಭಾನುವಾರ ಕಬಕ ಗ್ರಾ.ಪಂ ಆವರಣದಲ್ಲಿ ನಡೆದಿದೆ.
ರಥದಲ್ಲಿ ವೀರ ಸಾರ್ವಕರ್ ಫೋಟೋ ಅಳವಡಿಸಿದ್ದ ಕಾರಣಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಈ ವೇಳೆ ಪರಸ್ಪರ ವಾಗ್ವಾದ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು.
ವಿವಾದವು ಪರಸ್ಪರ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು, ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ ಪುತ್ತೂರು ನಗರ ಪೊಲೀಸರು ಎಸ್ಡಿಪಿಐ ಕಾರ್ಯಕರ್ತರನ್ನು ಚದುರಿಸಿದ್ದಾರೆ.