ಮಂಗಳೂರು, ಆ 15 (DaijiworldNews/SM): ದ.ಕ. ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಜಿಲ್ಲಾಡಳಿತ ನಿರಂತರ ಪ್ರಯತ್ನ ನಡೆಸುತ್ತಿದೆ. ಆದರೆ, ಅಂದುಕೊಂಡಷ್ಟು ಸಾಧ್ಯವಾಗುತ್ತಿಲ್ಲ. ಆಷಾಡ ಕಳೆದು ಶ್ರಾವಣ ಎದುರಾಗಿದ್ದು ಸಾಲು ಸಾಲು ಹಬ್ಬಗಳಿವೆ. ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ಜನರು ಎಚ್ಚರಿಕೆಯಿಂದ ವರ್ತಿಸಬೇಕಾಗಿದೆ.
ಈಗಾಗಲೇ ಕೇರಳದಿಂದ ಬರುವವರ ಮೇಲೆ ನಿರ್ಬಂಧ ವಿಧಿಸಲಾಗಿದೆ. ಆದರೂ ಜಿಲ್ಲೆಯಲ್ಲಿ ಅಂದುಕೊಂಡಷ್ಟು ನಿಯಂತ್ರಣಕ್ಕೆ ಬಂದಿಲ್ಲ. ಪರೀಕ್ಷೆ ಹೆಚ್ಚಾದಂತೆ ಸೋಂಕಿತರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಜಿಲ್ಲಾಡಳಿತ ಆರೋಗ್ಯ ಇಲಾಖೆ ಹಲವು ರೀತಿಯಲ್ಲಿ ಪ್ರಯತ್ನ ಗಳನ್ನು ನಡೆಸುತ್ತಿದೆ. ಆದರೆ, ಪಾಸಿಟಿವ್ ಪ್ರಕರಣಗಳು ಇಳಿಕೆಯಾಗಿಲ್ಲ. ಇನ್ನು ಮಂಗಳೂರಿನಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ಸಿಗುವ ಕಾರಣದಿಂದಾಗಿ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಜನ ಆಗಮಿಸುತ್ತಿದ್ದಾರೆ. ಹೊರಗಿನಿಂದ ಆಗಮಿಸಿದವರಲ್ಲೂ ಸೋಂಕು ಪತ್ತೆಯಾಗುತ್ತಿದೆ ಎನ್ನಲಾಗಿದೆ.
ಈ ನಡುವೆ ಆಷಾಡ ಕಳೆದು ಶ್ರಾವಣ ಬಂದಿದೆ. ಶ್ರವಣ ಮಾಸದಲ್ಲಿ ಹಬ್ಬಗಳ ಸಂಖ್ಯೆ ಹೆಚ್ಚಾಗಿದೆ. ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಜೊತೆ ಜೊತೆಯಲ್ಲಿ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ದ.ಕ. ಜಿಲ್ಲೆ ಪ್ರಸ್ತುತ ನಿತ್ಯದ ಸೋಂಕಿತರ ಸಂಖ್ಯೆಯಲ್ಲಿ ಮೊದಲ ಸ್ಥಾನಕ್ಕೇರುತ್ತಿದೆ. ಈ ಕಾರಣದಿಂದ ಮುಂದಿನ ದಿನಗಳಲ್ಲಿ ಕಠಿಣ ನಿಯಮಗಳಿಗೆ ಎಡೆಮಾಡಿಕೊಡದೆ, ನಾವೇ ಎಚ್ಚರಿಕೆಯಿಂದ ಇರೋದು ಅಗತ್ಯವಾಗಿದೆ.