ಪುತ್ತೂರು, ಆ.16 (DaijiworldNews/HR): ಕಬಕದಲ್ಲಿ ಸ್ವಾತಂತ್ರ್ಯದ ರಥವನ್ನು ತಡೆದು ದಾಂಧಲೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳು ಇಂದು ಪ್ರತಿಭಟನೆ ನಡೆಸುತ್ತಿದೆ.
ಕಬಕ ಜಂಕ್ಷನ್ನಲ್ಲಿ ನೂರಾರು ಸಂಖ್ಯೆಯ ಹಿಂದೂ ಕಾರ್ಯಕರ್ತರು ಸೇರಿದ್ದು, ರಥದಲ್ಲಿದ್ದ ವೀರ ಸಾವರ್ಕರ್ ಚಿತ್ರಕ್ಕೆ ಆಕ್ಷೇಪ ಸಲ್ಲಿಸಿ ರಥಕ್ಕೆ ಅಡ್ಡಿ ಪಡಿಸಿರುವುದಕ್ಕೆ ವಿರೋಧಿಸಿ ಆರೋಪಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಒತ್ತಾಯ ಮಾಡಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆ ಅಜೀಜ್ (43), ಶಮೀರ್ (40) ಅಬ್ದುಲ್ ರೆಹಮಾನ್ (34) ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.