ಕಾರ್ಕಳ,ಆ.16 (DaijiworldNews/HR): ಸ್ವಾತಂತ್ರ್ಯ ಹೋರಾಟಕ್ಕಾಗಿ ಕಾಂಗ್ರೆಸ್ ಪಕ್ಷದ ನೀಡಿದ ಕೊಡುಗೆ ಮಹತ್ವದಾಗಿದೆ. ಸ್ವಾತಂತ್ರ್ಯೋತ್ಸವದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ವರ್ಷ ಪೂರ್ತಿಯಾಗಿ ಹಮ್ಮಿಕೊಳ್ಳಲಾಗುವುದೆಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಸದಾಶಿವ ದೇವಾಡಿಗ ಹೇಳಿದರು.
ಕಾರ್ಕಳ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣೆಯನ್ನು ನದೆದಿದ್ದು, ಇದೇ ಸಂದರ್ಭದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ
ಭಾವಚಿತ್ರಕ್ಕೆ ಪುಷ್ಪಗುಚ್ಛ ಸಮರ್ಪಿಸಿ ಗೌರವ ಸಲ್ಲಿಸಲಾಯಿತು.
ನಿಕಟಪೂರ್ವ ಅಧ್ಯಕ್ಷ ಎಚ್. ಶೇಖರ ಮಡಿವಾಳ ಮಾತನಾಡಿ, "ದೇಶಕ್ಕೆ ಸ್ವಾತಂತ್ರ್ಯ ಚಳುವಳಿಯಲ್ಲಿ ಕಾಂಗ್ರೆಸ್ ಪಕ್ಷವೇ ಮುಚ್ಚೂಣಿಯಲ್ಲಿ ಇತ್ತು. ದೇಶದ ಪ್ರಥಮ ಪ್ರಧಾನಿಯಾಗಿ
ಆಯ್ಕೆಯಾದ ನೆಹರೂರವರು ದೇಶಕ್ಕೆ ಭದ್ರ ಬುನಾದಿಯನ್ನು ಹಾಕಿಕೊಟ್ಟರು. ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಹೂಳುವವನ್ನೇ ಹೊಲದ ಹೊಡೆಯನನ್ನಾಗಿ ರೂಪಿಸುವ ಮೂಲಕ
ಅದೆಷ್ಟೋ ಕುಟುಂಬಗಳಿಗೆ ದಾರಿದೀಪವಾಗಹಿದ್ದರು. ಅಲ್ಲದೇ ಮಾಜಿ ಪ್ರಧಾನಿ ರಾಜೀವ ಗಾಂಧಿಯವರು ಡಿಜಿಟಲ್ ಕ್ರಾಂತಿಯನ್ನು ಮಾಡುವ ಮೂಲಕ ದೇಶ ಹೊಸ ದಿಕ್ಕಿನೆಡೆಗೆ ಸಾಗಲು ನಾಂದಿ ಆಯಿತು ಎಂದು ಸ್ಮರಿಸಿದರು.
ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಶಾಂತ್ ಮಾತನಾಡಿ,ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೇಸ್ ನಾಯಕರ ತ್ಯಾಗ ಬಲಿದಾನದ ಬಗ್ಗೆ ವಿವರಿಸಿದರು.
ಬ್ಲಾಕ್ ಕಾಂಗ್ರೇಸ್ ಉಪಾಧ್ಯಕ್ಷ ರವಿಶಂಕರ್ ಶೇರಿಗಾರ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಭಾಕರ ಬಂಗೇರಾ, ಐವನ್ ಮಿರಾಂದ, ಜಿಲ್ಲಾ ಅಲ್ಪಸಂಖ್ಯಾತ ಘಟಕ ಸದಸ್ಯ ಎಂ.ಪಿ. ಮಹಮ್ಮದ್, ಪಂ.ಸ. ವಿಶ್ವನಾಥ ಭಂಡಾರಿ, ಕೃಷಿ ಘಟಕ ಅಧ್ಯಕ್ಷ ಉದಯ ವಿ. ಶೆಟ್ಟಿ, ಸೇವಾದಳ ಅಧ್ಯಕ್ಷ ಪ್ರಕಾಶ ಆಚಾರ್ಯ, ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಮಹಮ್ಮದ್ ಅಸ್ಲಾಂ, ಐಟಿ ಅಧ್ಯಕ್ಷ ಸತೀಶ ಕಾರ್ಕಳ, ನಗರಾಧ್ಯಕ್ಷೆ ಕಾಂತಿ ಶೆಟ್ಟಿ, ಪುರಸಭಾ ಸದಸ್ಯರುಗಳಾದ ಅಶ್ಪಕ್ ಅಹ್ಮದ್, ವಿನ್ನಿ ಬೋಲ್ಡ್ ಮೆಂಡೋನ್ಸಾ, ಪ್ರತಿಮಾ, ರೆಹಮತ್, ನಳಿನಿ ಆಚಾರ್ಯ, ಪ್ರಭಾ, ಮಹಿಳಾ ಕಾಂಗ್ರೇಸ್ ಕಾರ್ಯದರ್ಶಿ ಶೋಭಾ ವಿನ್ನಿ ಡಿಸೋಜ ಹಾಗೂ ಸತೀಶ ರಾವ್, ಸುನಿಲ್ ಭಂಡಾರಿ, ಗುರುಪ್ರಸಾದ, ಅಕ್ಷಯ ಎಂ.ಜೆ. ಕೃಷ್ಣ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.