ಕೋಟ, ಆ 17 (DaijiworldNews/MS): ಕೋವಿಡ್ ನಿಯಂತ್ರಣದಲ್ಲಿ ಗ್ರಾಮ ಪಂಚಾಯಿತಿಗಳ ಸೇವೆ ಅನನ್ಯವಾಗಿದೆ.ಗ್ರಾಮ ಪಂಚಾಯಿತಿಗಳಲ್ಲಿ ಕೆಡಿಪಿ ಸಭೆಗಳನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಬೇಕು.ಕೆಡಿಪಿ ಸಭೆಗಳಲ್ಲಿ ಅಧಿಕಾರಿಗಳನ್ನು ಕರೆದು ಗ್ರಾಮದ ಅಭಿವೃದ್ದಿಯ ನಿಟ್ಟಿನಲ್ಲಿ ಚರ್ಚೆ ನಡೆಸಬೇಕು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಸೋಮವಾರ ಕೋಟ ಗ್ರಾಮ ಪಂಚಾಯಿತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಸಭಾಭವನ, ಮೀಟಿಂಗ್ ಹಾಲ್ ಹಾಗೂ 14ನೇ ಹಣಕಾಸು ಯೋಜನೆಯಲ್ಲಿ ನಿರ್ಮಾಣಗೊಂಡ ವಿಕಲಚೇತರ ಕೊಠಡಿ ಉದ್ಘಾಟಿಸಿ ಮಾತನಾಡಿದರು.
ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿಗೆ ಎಲ್ಲಾ ಯೋಜನೆಗಳು ಬರಲಿದ್ದು, ಮುಂದೆ ಅಭಿವೃದ್ದಿ ಕಾರ್ಯಗಳಿಗೆ ಗ್ರಾಮ ಪಂಚಾಯಿತಿ ಪ್ರಧಾನವಾಗಲಿದೆ ಎಂದರು.
ಸಮಾರಂಭ ಅಧ್ಯಕ್ಷತೆಯನ್ನು ಕೋಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಜಿತ್ ದೇವಾಡಿಗ ವಹಿಸಿದ್ದರು. ಇದೇ ಸಂದರ್ಭದಲ್ಲಿಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಲಾಯಿತು. ಕಾರ್ಮಿಕ ಇಲಾಖೆಯ ಅಧಿಕಾರಿ ಕುಮಾರ್ ಮಾತನಾಡಿದರು.ವೇದಿಕೆಯಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಜಯಂತಿ ಪೂಜಾರಿ ಉಪಸ್ಥಿತರಿದ್ದರು.
ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಸುರೇಶ್ ಬಂಗೇರ ಸ್ವಾಗತಿಸಿದರು.ಪಂಚಾಯಿತಿ ಸದಸ್ಯ ಚಂದ್ರ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.ಪಂಚಾಯತ್ ಸದಸ್ಯ ಸಂತೋಷ್ ಪ್ರಭು ಸಹಕರಿಸಿದರು.