ಮಂಗಳೂರು, ಆ.17 (DaijiworldNews/HR): ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಡಾ.ಬಿ.ಎ.ಮೊಹಿದೀನ್ ಬಾವ ಅವರು ತಮ್ಮ ಕಾರಿನಲ್ಲಿ ಸಂಚರಿಸುತ್ತಿರುವಾಗ ಪುತ್ತೂರಿನ ಇಬ್ಬರು ಯುವಕರ ಬೈಕ್ ಅಪಘಾತಕ್ಕೀಡಾಗಿದ್ದು ತಕ್ಷಣ ತನ್ನ ಕಾರು ನಿಲ್ಲಿಸಿದ ಮೊಹಿದೀನ್ ಬಾವ ಅವರು ಗಾಯಾಳುಗಳಿಬ್ಬರನ್ನು ತನ್ನ ಕಾರಿನಲ್ಲೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಕೌಶಿಕ್ ಮತ್ತು ಹೇಮಂತ್ ಎಂಬ ಇಬ್ಬರು ಯುವಕರು ಬೈಕ್ ಸ್ಕಿಡ್ ಆಗಿ ರಸ್ತೆಗೆಸೆಯಲ್ಪಟ್ಟಿದ್ದರು.
ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಮೊಹಿದೀನ್ ಬಾವ ಅವರು ತಕ್ಷಣ ಕಾರು ನಿಲ್ಲಿಸಿ ಅಪಘಾತಕ್ಕೀಡಾಗಿ ರಸ್ತೆಗೆಸೆಯಲ್ಪಟ್ಟಿದ್ದ ಯುವಕರನ್ನು ತನ್ನ ಕಾರಿನಲ್ಲೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.