ಕಾರ್ಕಳ, ಆ.17 (DaijiworldNews/HR): ಲವ್ ಜಿಹಾದ್, ಭಯೋತ್ಪಾದನೆ ವಿಶ್ವ ಶಾಂತಿಗೆ ಅಪಾಯತಕಾರಿಯಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಠಿನ ಕ್ರಮ ಕೈಗೊಳ್ಳಬೇಕು ಎಂದು ಕಾರ್ಕಳ ತಾಲೂಕು ಹಿಂಜಾವೇ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ನಾರಾವಿ ಒತ್ತಾಯಸಿದಿದ್ದಾರೆ.
ಲವ್ ಜೆಹಾದ್ ಮತ್ತು ಉಗ್ರಗಾಮಿ ಚಟುವಟಿಕೆಯ ವಿರುದ್ದ ಹಿಂದು ಜಾಗರಣ ವೇದಿಕೆ ವತಿಯಿಂದ ಉಡುಪಿ ಜಿಲ್ಲೆಯ 7 ತಾಲೂಕಿನಲ್ಲಿ ಏಕಕಾಲದಲ್ಲಿ ಬೃಹತ್ ಪ್ರತಿಭಟನೆ ಆಯೋಜನೆಗೊಂಡಿದ್ದು, ಇದರ ಭಾಗವಾಗಿ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಆಯೋಜಿಸಿದ ಸಭೆಯ್ನನು ಉದ್ದೇಶಿಸಿ ಮಾತನಾಡಿದರು.
ಲವ್ ಜೆಹಾದ್ ವಿರುದ್ದ ಕಠಿಣ ಕಾಯ್ದೆ ಮತ್ತು ಕರಾವಳಿ ತೀರದಲ್ಲಿ ಹೆಚ್ಚುತ್ತಿರುವ ಉಗ್ರಗಾಮಿ ಚಟುವಟಿಕೆಯನ್ನು ಹತ್ತಿಕ್ಕಲು ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯನ್ನು ಸ್ಥಾಪಿಸಲು ಆಗ್ರಹಿಸಿ ಕಾರ್ಕಳ ತಾಲೂಕು ತಹಶೀಲ್ದಾರ್ ಪ್ರಕಾಶ್ ಎಂ.ಮರಬಳ್ಳಿ ಅವರಿಗೆ ಸಂದರ್ಭದಲ್ಲಿ ಮನವಿ ಸಲ್ಲಿಸಲಾಯಿತು.
ಉಡುಪಿ ಜಿಲ್ಲಾ ಹಿಂಜಾವೇ ಭೂ ಸುರಕ್ಷಾ ಪ್ರಮುಖ್ ರಮೇಶ್ ಕಲ್ಲೊಟ್ಟೆ, ಕಾರ್ಕಳ ನಗರ ಹಿಂಜಾವೇ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ, ಕಾರ್ಕಳ ನಗರ ಹಿಂಜಾವೇ ಪ್ರಧಾನ ಕಾರ್ಯದರ್ಶಿ ಸುಜಿತ್ ಸಫಲಿಗ, ಹಿಂಜಾವೇ ಜಿಲ್ಲಾ ಸಹ ಪ್ರಚಾರ್ ಪ್ರಮುಖ್ ತಿಲಕ್ ಸಾಣೂರು, ಹರೀಶ್ ಕಿಚ್ಚ,ಪ್ರಾಣೇಶ್ ಶೆಟ್ಟಿ, ಸುಭಾಷ್ ಚಂದ್ರ ಹೆಗ್ಡೆ ನಿಟ್ಟೆ, ಮುಟ್ಲುಪಾಡಿ ಸತೀಶ್ ಶೆಟ್ಟಿ ಇತರರು ಉಪಸ್ಥಿತರಿದ್ದರು.