ಬೆಳ್ತಂಗಡಿ, ಆ.19 (DaijiworldNews/HR): ಸಾಮಾಜಿಕ ಜಾಲತಾಣಗಳಲ್ಲಿ ವಿಕೃತ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಹಾಕಿ, ಮಾನಹಾನಿ ಮಾಡಿ ವೈಯಕ್ತಿಕ ಘನತೆಗೆ ಹಾನಿ ಮಾಡಿರುವ ಕುರಿತು ಯುವಕನೊಬ್ಬ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.
ಸಾಂಧರ್ಭಿಕ ಚಿತ್ರ
ಲಾಯಿಲದ ಯುವಕ ಸುಶಾನ್ ಚಂದ್ರ ಎಂಬಾತನ ಮೇಲೆ ವಾಟ್ಸಪ್ ಹಾಗೂ ಫೇಸ್ ಬುಕ್ ನಲ್ಲಿ ಅಶ್ಲೀಲವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇನ್ನು ವಾಟ್ಸಪ್ ಗ್ರೂಪ್ ಹಾಗೂ ನಕಲಿ ಫೇಸ್ ಬುಕ್ ಖಾತೆಯಿಂದ ನನ್ನ ಕುರಿತು ಅಶ್ಲೀಲ ಸಂದೇಶಗಳು ಹರಿದಾಡುತ್ತಿದ್ದು, ನನಗೆ ಹಾಗೂ ನನ್ನ ಮನೆಯವರಿಗೆ ಬೇರೆ ಬೇರೆ ಸಂಖ್ಯೆಯಿಂದ ಬೆದರಿಕೆ ಕರೆಗಳು ಕೂಡ ಬರುತ್ತಿದ್ದು, ನನ್ನ ಬಗ್ಗೆ ಅಪಪ್ರಚಾರ ಮಾಡಿದವರನ್ನು ಆದಷ್ಟು ಬೇಗ ಪತ್ತೆ ಹಚ್ಚಿ ಎಂದು ದೂರಿನಲ್ಲಿ ತಿಳಿಸಿದ್ದಾರೆ.