ಉಡುಪಿ, ಆ 20 (DaijiworldNews/MS):ಮಣಿಪಾಲದ ಅಂಗಡಿ ಯೊಂದರಲ್ಲಿ ಬೆಂಕಿ ಅವಘಡ ನಡೆದಿರುವ ಘಟನೆ ಆ.19 ರ ಗುರುವಾರ ರಾತ್ರಿ ನಡೆದಿದೆ.
ಖ್ಯಾತ ಫುಟ್ ವೇರ್ ಮಳಿಗೆಗೆ ಇದಾಗಿದ್ದು ಶಾಟ್ ಸರ್ಕ್ಯೂಟ್’ನಿಂದ ದುರಂತ ಸಂಭವಿಸಿದೆ. ಒಳಗಿದ್ದ ಸಂಪೂರ್ಣ ದಾಸ್ತಾನು ಬೆಂಕಿಗಾಹುತಿಯಾಗಿದ್ದು ಉಡುಪಿ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.
ಅಂಗಡಿ ಮಾಲೀಕರು ರಾತ್ರಿ ವ್ಯವಹಾರ ಮುಗಿಸಿ ಅಂಗಡಿ ಮುಚ್ಚಿ ತೆರಳಿದ ಬಳಿಕ ಈ ಘಟನೆ ನಡೆದಿದ್ದು, ಫುಟ್ ವೇರ್ ಮಳಿಗೆ ಅಲ್ಲದೇ ಪಕ್ಕದ ಒಂದು ಅಂಗಡಿಗೂ ಹೊಗೆ ಆವರಿಸಿಕೊಂಡಿತ್ತು.
ಘಟನೆಯಿಂದ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.