ಉಡುಪಿ, ಆ 20 (DaijiworldNews/MS): ಗದ್ದೆ ಬದಿಯಲ್ಲಿ ನಡೆದುಕೊಂಡು ಹೋಗುತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಪರ್ಕಳದ ಪರೀಕದಲ್ಲಿ ನಡೆದಿದೆ.
ಪ್ರಾತಿನಿಧಿಕ ಚಿತ್ರ
ಉಡುಪಿಯಲ್ಲಿ ಶುಕ್ರವಾರ ಬೆಳಗ್ಗೆಯಿಂದ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿದೆ. ಸಿಡಿಲು ಅಪ್ಪಳಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.