ಬೆಳ್ಮಣ್, ಆ 20 (DaijiworldNews/MS): ಬಾವಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂದಳಿಕೆ ಬೋರ್ಡು ಶಾಲಾ ಬಳಿಯಲ್ಲಿ ನಡೆದಿದೆ.
ಮೃತರನ್ನುರಾಜೇಂದ್ರ ಪ್ರಸಾದ್ (45) ಎಂದು ಗುರುತಿಸಲಾಗಿದೆ. ಇವರು 17 ವರ್ಷಗಳಿಂದ ವಿದೇಶದಲ್ಲಿ ದುಡಿಯುತ್ತಿದ್ದು ಕಳೆದ ಕೆಲ ತಿಂಗಳ ಹಿಂದೆ ರಜೆಯಲ್ಲಿ ಊರಿಗೆ ಬಂದಿದ್ದು ಕೋವಿಡ್ ನಿಂದಾಗಿ ವಿದೇಶಕ್ಕೆ ತೆರಳಲು ಆಗದ ಹಿನ್ನಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ತನ್ನ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.