ಮಂಗಳೂರು, ಆ. 20 (DaijiworldNews/SM): ದ.ಕ. ಜಿಲ್ಲೆಯಲ್ಲಿ ಈ ವಾರದಲ್ಲೂ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಶನಿವಾರ ಹಾಗೂ ರವಿವಾರದಂದು ಕಳೆದ ವಾರದಂತೆ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರಲಿದೆ.
ಈಗಾಗಲೇ ಶುಕ್ರವಾರ ರಾತ್ರಿಯಿಂದ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದೆ. ಮಧ್ಯಾಹ್ನ ಎರಡು ಗಂಟೆಯ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ಬಸ್ ಸಂಚಾರಕ್ಕೆ ಅವಕಾಶವಿದೆ. ಆಸ್ಪತ್ರೆ ಸೇರಿದಂತೆ ತುರ್ತು ಸೇವೆಗಳನ್ನು ಪಡೆಯಲು ಅನುಮತಿಸಲಾಗಿದೆ. ಅನಗತ್ಯ ಸಂಚಾರಕ್ಕೆ ಹಾಗೂ ಅನಗತ್ಯ ಅಂಗಡಿಗಳ ಕಾರ್ಯಾಚರಣೆಗೆ ಅವಕಾಶವಿಲ್ಲ.