ಮಂಗಳೂರು, ಆ 21 (DaijiworldNews/MS): ನಗರದ ಮಹಾಕಾಳಿ ಪಡ್ಪು ಎಂಬಲ್ಲಿ ಆಗಸ್ಟ್ 21 ರ ಶನಿವಾರ ಬೆಳಿಗ್ಗೆ ಸಂಭವಿಸಿದ ದುರಂತ ಘಟನೆಯಲ್ಲಿ, ಹಳಿ ದಾಟುವಾಗ ರೈಲಿನಡಿಗೆ ಸಿಲುಕಿ ಮಹಿಳೆಯರಿಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ಇವರಿಬ್ಬರೂ ಬೀಡಿ ಕೊಡಲೆಂದು ಬೀಡಿ ಬ್ರೆಂಚ್ ಗೆ ಹೋಗುವಾಗ ಈ ಘಟನೆ ನಡೆದಿದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಪಾರ್ಥಿವ ಶರೀರವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ.