ಮಂಗಳೂರು, ಆ 22 (DaijiworldNews/PY): "ಶಿರಾಡಿ ಘಾಟಿಯಲ್ಲಿ ಭಾನುವಾರದಿಂದ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ" ಎಂದು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶ ಹೊರಡಿಸಿದ್ದಾರೆ.
ಆ.22ರಿಂದ ಜಾರಿಗೆ ಬರುವಂತೆ ಹಾಸನ ಜಿಲ್ಲಾಡಳಿತ ಆದೇಶಿಸಿದೆ.
"ಬೆಳಗ್ಗೆ 6ರಿಂದ 7ರವರೆಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಎಲ್ಲಾ ರೀತಿಯ ವಾಹನ ಸಂಚಾರಕ್ಕೂ ಅವಕಾಶ ಕಲ್ಪಿಸಲಾಗಿದೆ. ಸಿಂಗಲ್ ಲೇನ್ನಲ್ಲಿ ಮಾತ್ರವೇ ಸಂಚಾರಕ್ಕೆ ಅವಕಾಶ" ಎಂದು ಹಾಸನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಹಾಸನದ ಮಾರನಹಳ್ಳಿ ಎಂಬಲ್ಲಿ ಭೂ ಕುಸಿತ ಉಂಟಾದ ಹಿನ್ನೆಲೆ ಸಂಚಾರ ನಿರ್ಬಂಧಿಸಲಾಗಿತ್ತು.
ಭೂ ಕುಸಿತವಾದ ಸ್ಥಳ ಹಾಗೂ ವಾಹನಗಳ ಸಂಚಾರದ ಸ್ಥಿತಿಗತಿಗಳನ್ನು ಪರಿಶೀಲಿಸಲು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹಾಗೂ ಹಾಸನ ಜಿಲ್ಲಾಧಿಕಾರಿ ಗಿರೀಶ್ ಅವರು ಶನಿವಾರ ಜಂಟಿ ಸಮೀಕ್ಷೆ ನಡೆಸಿದ್ದರು.