ಕಾಸರಗೋಡು, ಆ. 22 (DaijiworldNews/HR): ಕಾರು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಆದಿತ್ಯವಾರ ಸಂಜೆ ಚೆಮ್ನಾಡ್ ಸೇತುವೆ ಬಳಿ ನಡೆದಿದೆ.
ಮೃತಪಟ್ಟವರನ್ನು ಚೆಮ್ನಾಡ್ನ ಮುಸ್ತಾಕ್ (20) ಹಾಗೂ ಗಾಯಗೊಂಡವರನ್ನು ಚೆಮ್ನಾಡ್ ಕಲರಿಕಾಲ್ನ ಮುಹಸೀನ್ (20) ಎಂದು ಗುರುತಿಸಲಾಗಿದೆ.
ಕಣ್ಣೂರು ಕಡೆಯಿಂದ ಅತೀ ವೇಗದಿಂದ ಬಂದ ಕಾರು ಹಾಗೂ ಎದುರಿನಿಂದ ಬರುತ್ತಿದ್ದ ಬೈಕ್ ನಡುವೆ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡ ಇಬ್ಬರನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮುಸ್ತಾಕ್ ಮೃತಪಟ್ಟಿದ್ದಾನೆ. ಇಬ್ಬರು ಐಟಿಐ ವಿದ್ಯಾರ್ಥಿಗಳಾಗಿದ್ದಾರೆ.
ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.